ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲೀಯಾಬನನ್ನೂ ನೇಮಿಸಿದ್ದೇನೆ. ಅದಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನೂ ಮಾಡುವುದಕ್ಕೆ ಜ್ಞಾನಿಗಳಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನುಂಟುಮಾಡಿದ್ದೇನೆ.
TSK
TSK · 2 ಪೇತ್ರನು 3:15
مراجع Treasury of Scripture Knowledge في ಕನ್ನಡ IRV.
ಕಸೂತಿ ಕೆಲಸ ಕಲ್ಪಿಸುವವರು, ನೀಲಿ, ನೇರಳೆ ಕಡುಗೆಂಪು ವರ್ಣದ ದಾರದಿಂದಲೂ, ಹತ್ತಿಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ಮಾಡುವ ಕೆಲಸಗಳನ್ನು ಕಸಿಮಾಡುವುದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.”
ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.
¶ “ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಮತ್ತು ಪಂಚಾಯತರನ್ನೂ ನೇಮಿಸು. ಅವರು ಹೊಳೆಯಾಚೆಯ ಇಸ್ರಾಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.
ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
‹ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.›
ನಾವು ಕೆಲವರನ್ನು ಆರಿಸಿಕೊಂಡು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾದ,
ಇವುಗಳನ್ನು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ಪವಿತ್ರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮೀಕವಾದವುಗಳನ್ನು ಆತ್ಮೀಕರಾದವರಿಗೆ ಯುಕ್ತವಾದ ರೀತಿಯಲ್ಲಿ ಸ್ಪಷ್ಟಪಡಿಸುತ್ತೇವೆ.
ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು
ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು.
ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.
ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.