ಆಗ ಸಮುವೇಲನು, “ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಆತನು ನಿನ್ನ ರಾಜ್ಯವನ್ನು ಇಸ್ರಾಯೇಲ್ಯರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು.
TSK
TSK · 2 ಸಮುವೇಲನು 12:7
مراجع Treasury of Scripture Knowledge في ಕನ್ನಡ IRV.
ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು, ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟುಹೋದನು.
ಅವಳು ದಾವೀದನಿಗೆ ಉರಲಾಗಿರುವಂತೆಯೂ, ಅವನು ಫಿಲಿಷ್ಟಿಯರ ಕೈಗೆ ಸಿಕ್ಕಿಬೀಳುವಂತೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡು ಅವನಿಗೆ, “ನೀನು ನನ್ನ ಅಳಿಯನಾಗುವುದಕ್ಕೆ ಈಗ ಎರಡನೆಯ ಸಂದರ್ಭವುಂಟಾಯಿತು” ಎಂದು ಹೇಳಿದನು.
ದಾವೀದನು ಕೆಯೀಲದಲ್ಲಿದ್ದಾನೆಂಬ ವರ್ತಮಾನವು ಸೌಲನಿಗೆ ಮುಟ್ಟಿತು. ಆಗ ಅವನು, ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದನು. ಅವನು ಅಗುಳಿ ಬಾಗಿಲುಗಳಿಂದ ಭದ್ರವಾಗಿರುವ ಪಟ್ಟಣವನ್ನು ಪ್ರವೇಶಿಸಿದ್ದಾನಲ್ಲಾ ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು ಅಂದುಕೊಂಡು,
ಅದರ ಇನ್ನೊಂದು ಕಡೆಯಲ್ಲಿ ದಾವೀದನೂ ಅವನ ಜನರೂ ಇದ್ದರು. ದಾವೀದನೂ ಅವನ ಜನರೂ ತಪ್ಪಿಸಿಕೊಳ್ಳುವುದಕ್ಕೆ ತ್ವರೆಪಡುವಷ್ಟರಲ್ಲಿ ಸೌಲನೂ, ಅವನ ಜನರೂ ಬಂದು ಅವರನ್ನು ಮುತ್ತಿಗೆ ಹಾಕುವುದಕ್ಕಿದ್ದರು.
ಆಕೆಯು, “ಅರಸನು ಈ ತೀರ್ಪು ಕೊಟ್ಟಿದ್ದರಿಂದ ತನ್ನನ್ನು ತಾನೇ ಅಪರಾಧಿ ಎಂದು ನಿರ್ಣಯಿಸಿದ ಹಾಗಾಯಿತು. ಅವನು ತಳ್ಳಲ್ಪಟ್ಟ ಮಗನನ್ನು ಸೇರಿಸಿಕೊಳ್ಳದೆ ಹೋಗುವುದರಿಂದ ದೇವಪ್ರಜೆಗೆ ವಿರೋಧವಾಗಿ ಆಲೋಚನೆ ಮಾಡಿದ ಹಾಗಾಯಿತು. ಅರಸನು ಹೀಗೇಕೆ ಮಾಡಬೇಕು?
ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಂದ ತಪ್ಪಿಸಿ ಉನ್ನತಪಡಿಸುತ್ತಿ. ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತಿ.
ನಾನು ಕೆಲಸದಲ್ಲಿದ್ದಾಗ ಅವನು ತಪ್ಪಿಸಿಕೊಂಡು ಹೋದನು” ಎಂದು ಮೊರೆಯಿಟ್ಟನು. ಇಸ್ರಾಯೇಲರ ಅರಸನು ಇವನಿಗೆ “ನಿನಗೆ ಆ ತೀರ್ಪು ಸರಿಯಾಗಿದೆ, ತೀರ್ಮಾನಿಸಿದವನು ನೀನೇ ಅಲ್ಲವೋ?” ಎಂದು ನುಡಿದನು.
ಅವನಿಗೆ ನೀನು ಕೊಲೆ ಮಾಡಿ ಸ್ವತ್ತನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು” ಎಂಬುದೇ.
¶ ಆಗ ಪ್ರವಾದಿಯಾದ ಯೆರೆಮೀಯನು ಈ ಮಾತುಗಳನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು.