ಅದಕ್ಕೆ ದಾವೀದನು, “ನಿನ್ನ ಕಣ್ಣುಮುಂದೆ ನನಗೆ ದಯೆ ದೊರಕುತ್ತದೆಂಬುದನ್ನು ನಿನ್ನ ತಂದೆಯು ಬಲ್ಲನು. ಆದ್ದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಅಂತರವಿದೆ” ಎಂದು ಖಂಡಿತವಾಗಿ ಹೇಳಿದನು.
TSK
TSK · 2 ಸಮುವೇಲನು 15:21
مراجع Treasury of Scripture Knowledge في ಕನ್ನಡ IRV.
ಆಗ ಎಲೀಯನು ಎಲೀಷನಿಗೆ, “ನೀನು ಇಲ್ಲೇ ಇರು, ಯೆಹೋವನು ನನಗೆ ಬೇತೇಲಿಗೆ ಹೋಗಬೇಕೆಂದು” ಆಜ್ಞಾಪಿಸಿದ್ದಾನೆ ಎನ್ನಲು, ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರಕೊಟ್ಟನು. ತರುವಾಯ ಅವರಿಬ್ಬರೂ ಬೇತೇಲಿಗೆ ಹೋದರು.
ಎಲೀಯನು ತಿರುಗಿ ಅವನಿಗೆ, “ನೀನು ಇಲ್ಲೇ ಇರು. ಯೆಹೋವನು ನನಗೆ ಯೊರ್ದನಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಅದಕ್ಕೆ ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರ ಕೊಟ್ಟನು. ಅನಂತರ ಅವರಿಬ್ಬರೂ ಹೊರಟು ಯೊರ್ದನ್ ಹೊಳೆಯ ದಡಕ್ಕೆ ಬಂದರು.
ಮಿತ್ರನ ಪ್ರೀತಿಯು ನಿರಂತರ, ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.
ಆಗ ಒಬ್ಬ ಶಾಸ್ತ್ರಿಯು ಹತ್ತಿರಕ್ಕೆ ಬಂದು ಆತನಿಗೆ, “ಗುರುವೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು,
ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.
ನಿಮ್ಮ ಮೇಲೆ ತಪ್ಪುಹೊರಿಸಬೇಕೆಂದು ನಾನು ಇದನ್ನು ಹೇಳುತ್ತಿಲ್ಲ; ನಿಮ್ಮ ಜೊತೆ ಸಾಯುವುದಕ್ಕೂ, ಬದುಕುವುದಕ್ಕೂ ಎನ್ನುವಷ್ಟರ ಮಟ್ಟಿಗೆ ನೀವು ನಮ್ಮ ಹೃದಯದಲ್ಲಿದ್ದೀರೆಂದು ನಾನು ಮೊದಲೇ ಹೇಳಿದ್ದೆನಲ್ಲಾ.