ಅದಕ್ಕೆ ನಾನು ‘ಯಾರಲ್ಲಿ ಚಿನ್ನದ ಒಡವೆಯಿದೆಯೋ ಅವರೆಲ್ಲರೂ ಅದನ್ನು ಬಿಚ್ಚಿ ನನಗೆ ಕೊಡಬೇಕು’ ಅಂದೆನು. ಅವರು ಹಾಗೆ ಕೊಡಲಾಗಿ ನಾನು ಆ ಚಿನ್ನವನ್ನು ಬೆಂಕಿಯಲ್ಲಿ ಹಾಕಿದಾಗ ಈ ಹೋರಿಕರುವಿನ ರೂಪವು ಉಂಟಾಯಿತು” ಅಂದನು.
TSK
TSK · 2 ಸಮುವೇಲನು 19:9
مراجع Treasury of Scripture Knowledge في ಕನ್ನಡ IRV.
ದಾವೀದನಾದರೋ ಸೌಲನು ಎಲ್ಲಿಗೆ ಕಳುಹಿಸಿದರೂ ಹೋಗಿ ಎಲ್ಲವನ್ನು ವಿವೇಕದಿಂದ ನಡೆಸುತ್ತಿದ್ದನು. ಸೌಲನು ಇವನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇದು ಅವನ ಸೇವಕರಿಗೂ, ಎಲ್ಲಾ ಜನರಿಗೂ ಮೆಚ್ಚಿಗೆಯಾಯಿತು.
ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಫಿಲಿಷ್ಟಿಯನನ್ನು ಕೊಂದನು. ಯೆಹೋವನು ಇಸ್ರಾಯೇಲ್ಯರಿಗೆ ಮಹಾ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ. ದಾವೀದನನ್ನು ನಿಷ್ಕರುಣೆಯಾಗಿ ಕೊಂದು, ನಿರಪರಾಧಿಯ ರಕ್ತವನ್ನು ಸುರಿಸಿ, ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ?” ಅಂದನು.
¶ ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಮುತ್ತಿಗೆ ಹಾಕಿ, ಅವರನ್ನು ಸೋಲಿಸಿ, ಅವರ ರಾಜಧಾನಿಯನ್ನು ವಶಪಡಿಸಿಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.
ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡದಾದ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.