ಈಗ ನೋಡು ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು ‘ತಮ್ಮನನ್ನು ಕೊಂದವನೆಲ್ಲಿ?, ಅವನನ್ನು ನಮಗೆ ಒಪ್ಪಿಸು. ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು, ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದಿದ್ದಾರೆ” ಎಂದು ಉತ್ತರ ಕೊಟ್ಟಳು.
TSK
TSK · 2 ಸಮುವೇಲನು 21:17
مراجع Treasury of Scripture Knowledge في ಕನ್ನಡ IRV.
ಆಗ ಸೈನ್ಯದವರು ಅವನಿಗೆ, “ನೀನು ಬರಬಾರದು. ನಾವು ಸೋತು ಓಡಿಹೋದರೆ ಶತ್ರುಗಳು ಅದನ್ನು ಗಮನಿಸುವುದಿಲ್ಲ. ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರಿಗಿರುವ ಬೆಲೆ ನಿನ್ನೊಬ್ಬನಿಗೆ ಉಂಟು. ನೀನು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು” ಎಂದನು.
ಅವರು ನನ್ನ ಆಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು. ಆಗ ಯೆಹೋವನು ನನಗೆ ಉದ್ಧಾರಕನಾದನು.
ನಾನು ನನ್ನ ಹೆಸರಿಗೋಸ್ಕರ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ನನ್ನ ಸೇವಕನಾದ ದಾವೀದನ ದೀಪವು ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.
ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.
‹ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.›