ನೀವು ನನ್ನನ್ನು ಹಾಗೆ ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.
TSK
TSK · 2 ಸಮುವೇಲನು 24:1
مراجع Treasury of Scripture Knowledge في ಕನ್ನಡ IRV.
ಆದರೂ ನಾನು ಫರೋಹನ ಮನಸ್ಸಿನಲ್ಲಿ ಹಠವನ್ನು ಹುಟ್ಟಿಸಿ, ಐಗುಪ್ತದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಕಾರ್ಯಗಳನ್ನೂ ಮಾಡಿ ನನ್ನ ಶಕ್ತಿಯನ್ನು ತೋರಿಸುವೆನು.
ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.
ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.
ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನಾನು ನಿಮಗೇನು ಮಾಡಿದೆ? ಬಹುಶಃ ಅವನು ನನ್ನನ್ನು ಶಪಿಸಿದ್ದಾನೆ, ಏಕೆಂದರೆ, ‘ದಾವೀದನನ್ನು ಶಪಿಸು’ ಎಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದಿ?’ ಎಂದು ಅವನನ್ನು ಕೇಳುವವರು ಯಾರು?” ಎಂದು ಉತ್ತರ ಕೊಟ್ಟನು.
ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸುವಿರಿ’ ಎಂದು ಕೇಳಿದಾಗ ಒಬ್ಬನು ಒಂದು ರೀತಿಯಾಗಿ, ಇನ್ನೊಬ್ಬನು ಇನ್ನೊಂದು ರೀತಿಯಾಗಿ ಉತ್ತರಕೊಟ್ಟರು.
ಇವರೆಲ್ಲರು ಆಶೇರ್ಯರಲ್ಲಿ ಗೋತ್ರಪ್ರಧಾನರೂ, ಯುದ್ಧಪ್ರವೀಣರಾದ ರಣವೀರರೂ ಮತ್ತು ಶ್ರೇಷ್ಠ ನಾಯಕರೂ ಆಗಿದ್ದರು. ಇವರ ವಂಶಾವಳಿಯ ಪಟ್ಟಿಯ ಪ್ರಕಾರ ಯುದ್ಧ ಪ್ರವೀಣರಾದ ಭಟರ ಸಂಖ್ಯೆ ಇಪ್ಪತ್ತಾರು ಸಾವಿರ.
¶ ಇಸ್ರಾಯೇಲರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂಬುದಾಗಿ ಯೆಹೋವನು ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರ್ಷಕ್ಕಿಂತ ಕಡಿಮೆ ವಯಸ್ಸುಳ್ಳವರನ್ನು ಪರಿಗಣಿಸಲಿಲ್ಲ.
ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.
“ಇದಲ್ಲದೆ, ನಾನೇ ಯೆಹೋವನು ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ಆಜ್ಞೆಗಳನ್ನೂ, ಜೀವಾಧಾರವಲ್ಲದ ವಿಧಿಗಳನ್ನೂ ನೇಮಿಸಿದೆನು.
ಇದೇ ಕಾರಣದಿಂದ ದೇವರು ಗಾಢಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಒಳಪಡಿಸುತ್ತಾನೆ.