“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದ ಒಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಾಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ” ಎಂದು ತಿಳಿಸಿದ್ದನು.
TSK
TSK · 2 ಸಮುವೇಲನು 5:2
مراجع Treasury of Scripture Knowledge في ಕನ್ನಡ IRV.
¶ ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.
ದಾವೀದನಾದರೋ ಸೌಲನು ಎಲ್ಲಿಗೆ ಕಳುಹಿಸಿದರೂ ಹೋಗಿ ಎಲ್ಲವನ್ನು ವಿವೇಕದಿಂದ ನಡೆಸುತ್ತಿದ್ದನು. ಸೌಲನು ಇವನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇದು ಅವನ ಸೇವಕರಿಗೂ, ಎಲ್ಲಾ ಜನರಿಗೂ ಮೆಚ್ಚಿಗೆಯಾಯಿತು.
ಆದರೆ ಇಸ್ರಾಯೇಲರೂ, ಯೆಹೂದ್ಯರೂ ತಮ್ಮ ಸಂಗಡ ಹೋಗುತ್ತಾ ಬರುತ್ತಾ ಇದ್ದ ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದರು.
ಯೆಹೋವನು ನನ್ನ ಸ್ವಾಮಿಯಾದ ನಿನಗೆ ವಾಗ್ದಾನಮಾಡಿರುವ ಎಲ್ಲಾ ಸೌಭಾಗ್ಯವನ್ನು ದಯಪಾಲಿಸಲಿ. ನಿನ್ನನ್ನು ಇಸ್ರಾಯೇಲ್ಯರ ಪ್ರಭುವನ್ನಾಗಿ ಮಾಡಿದ ಮೇಲೆ,
ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೊಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ಕುಲನಾಯಕನನ್ನಾದರೂ ನೀವು ನನಗೋಸ್ಕರ ದೇವದಾರು ಮರದ ಮನೆಯನ್ನೇಕೆ ಕಟ್ಟಲಿಲ್ಲವೆಂದು ಕೇಳಿದೆನೋ?’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳು.
“ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.
ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.
¶ “‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.
ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.
‹ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ; ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಅವನು ತನ್ನ ಸ್ವಂತ ಕುರಿಗಳ ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ.›
ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.