ಈಗಲಾದರೋ ನಿನ್ನ ಅರಸುತನವು ನಿಲ್ಲುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಹೋದುದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇಮಿಸಿದ್ದಾನೆ” ಎಂದು ಹೇಳಿದನು.
TSK
TSK · 2 ಸಮುವೇಲನು 6:21
مراجع Treasury of Scripture Knowledge في ಕನ್ನಡ IRV.
¶ ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.
ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’” ಅಂದರು.
ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ, ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು.
ಯೆಹೋವನ ಒಡಂಬಡಿಕೆ ಮಂಜೂಷವು ದಾವೀದನ ನಗರಕ್ಕೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿನೋಡಿ ದಾವೀದನು ಜಿಗಿಯುತ್ತಾ, ಕುಣಿಯುತ್ತಾ, ನೃತ್ಯಮಾಡುತ್ತಾ ಇರುವುದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು.
ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.
ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.