ಮೋಶೆಯು ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ಪರದೆಯನ್ನು ಇರಿಸಿ ಯೆಹೋವನು ಆಜ್ಞಾಪಿಸಿದಂತೆಯೇ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು.
TSK
TSK · 2 ಸಮುವೇಲನು 7:2
مراجع Treasury of Scripture Knowledge في ಕನ್ನಡ IRV.
ಜನರು ಯೆಹೋವನ ಮಂಜೂಷವನ್ನು ತಂದು ದಾವೀದನು ಹಾಕಿಸಿದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿಟ್ಟರು. ಆಗ ದಾವೀದನು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.
ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷವೂ, ಇಸ್ರಾಯೇಲ್ಯರೂ, ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ, ಅವನ ಸೇವಕರೂ ಬಯಲಿನಲ್ಲಿ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಾಗ ನಾನು ಮಾತ್ರ ನನ್ನ ಮನೆಗೆ ಹೋಗಿ ಊಟಮಾಡಿ, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದ್ದನ್ನು ಮಾಡುವುದೇ ಇಲ್ಲ” ಎಂದು ಉತ್ತರಕೊಟ್ಟನು.
ಆದರೆ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಮತ್ತು ದಾವೀದನ ವಿಶೇಷ ಕಾವಲಿನವರು ಅದೋನೀಯನನ್ನು ಬೆಂಬಲಿಸಲಿಲ್ಲ.
¶ ತೂರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನೂ, ದೇವದಾರುಮರಗಳನ್ನೂ, ಶಿಲ್ಪಿಗಳನ್ನೂ ಮತ್ತು ಬಡಗಿಗಳನ್ನು ಅವನ ಬಳಿಗೆ ಕಳುಹಿಸಿದನು.
¶ ದಾವೀದನ ಪೂರ್ವೋತ್ತರಚರಿತ್ರೆ ಅವನ ಆಳ್ವಿಕೆ, ಪರಾಕ್ರಮ ಅವನಿಗೂ ಇಸ್ರಾಯೇಲರಿಗೂ, ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖದುಃಖ ಇವುಗಳ ವೃತ್ತಾಂತ.
ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕೋಸ್ಕರ ಲೇವಿಯರನ್ನು, ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ನಿಲ್ಲಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.
ಅವನು ಯೆಹೋವನಿಗೆ ಪ್ರಮಾಣಮಾಡಿ, ಯಾಕೋಬನ ಶೂರನಿಗೆ ಹರಕೆ ಮಾಡಿಕೊಂಡನಲ್ಲಾ.
“ಈ ನನ್ನ ಆಲಯವು ಹಾಳು ಬಿದ್ದಿರುವಾಗ, ನೀವು ನಿಮ್ಮ ಒಳಗೋಡೆಗೆಲ್ಲಾ ಸುಂದರ ಹಲಿಗೆ ಹೊದಿಸಿಕೊಂಡ ಸ್ವಂತ ಮನೆಗಳಲ್ಲಿ ವಾಸಿಸುವುದಕ್ಕೆ ಈ ಸಮುಯವು ತಕ್ಕದ್ದೋ?”
ದಾವೀದನು ದೇವರ ಸನ್ನಿಧಾನದಲ್ಲಿ ಕೃಪೆ ಹೊಂದಿ ಯಾಕೋಬನ ವಂಶದವರಿಗೋಸ್ಕರ ದೇವಾಲಯವನ್ನು ಕಟ್ಟಿಸುವುದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡನು.