TSK

TSK · 2 ತಿಮೊಥೆಯನಿಗೆ 2:14

مراجع Treasury of Scripture Knowledge في ಕನ್ನಡ IRV.

العودة إلى المقطع

ದೇವರಿಗೆ ಇಷ್ಟವಿಲ್ಲದ ವಿಷಯಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ, ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ.

ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನ್ನ ಬದಲಾಗಿ ಕೆಲಸಕ್ಕೆ ಬಾರದವುಗಳನ್ನು ಆರಿಸಿಕೊಂಡಿದ್ದಾರೆ.

¶ ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.

ಎಂದು ಕೇಳಬೇಕೇ ಹೊರತು ಯೆಹೋವನ ಹೊರೆ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಹೊರೆಯಾಗಿರುವುದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆ ಕೆಳಗೆ ಮಾಡಿದ್ದೀರಷ್ಟೆ.

‹ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?›

¶ “ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,

ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ.

¶ ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.

ಕಲ್ಪಿತಕಥೆಗಳಿಗೂ, ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ, ಆಜ್ಞಾಪಿಸಬೇಕೆಂಬುದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತಿದೇನೆ. ಅಂತಹ ಕಥೆಗಳೂ, ವಂಶಾವಳಿಗಳೂ ವಿವಾದಕ್ಕೆ ಎಡೆಮಾಡಿಕೊಡುತ್ತದೆಯೇ ಹೊರತು ದೇವರ ಯೋಜನೆಗಳಿಗೆ ಅನುಕೂಲವಾಗಿರುವುದಿಲ್ಲ. ನಂಬಿಕೆಯಿಂದ ಮಾತ್ರ ಅದು ಸಾಧ್ಯವಾಗುತ್ತದೆ.

ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.

ಅವನು ಅಹಂಭಾವಿಯೂ ಅಜ್ಞಾನಿಯೂ ಆಗಿದ್ದು, ನಿಂದನೆ ವಾಗ್ವಾದಗಳನ್ನುಂಟು ಮಾಡುವ ಭ್ರಾಂತಿಯಲ್ಲಿದ್ದಾನೆ. ಇವುಗಳಿಂದ ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯ ಮುಂತಾದವುಗಳು ಉಂಟಾಗುತ್ತವೆ.

¶ ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ ದೇವರ ಕೃಪಾವರವನ್ನು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನ್ನನ್ನು ಜ್ಞಾಪಿಸುತ್ತಿದ್ದೇನೆ.

ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.

ಆದರೆ ಬುದ್ಧಿಯಿಲ್ಲದ ತರ್ಕಗಳಿಂದಲೂ, ವಂಶಾವಳಿಗಳಿಂದಲೂ, ಜಗಳಗಳಿಂದಲೂ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಾಗ್ವಾದಗಳಿಂದಲೂ ದೂರವಾಗಿರು; ಅವು ನಿಷ್ಪ್ರಯೋಜಕವೂ ವ್ಯರ್ಥವೂ ಆಗಿವೆ.

ನಾನು ನನ್ನ ದೇಹವೆಂಬ ಗುಡಾರದಲ್ಲಿರುವ ತನಕ ನಿಮ್ಮನ್ನು ನೆನಪುಮಾಡಿಸಿ ಪ್ರೇರೇಪಿಸುವುದು ಯುಕ್ತವೆಂದೆಣಿಸಿದ್ದೇನೆ.