ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.
TSK
TSK · 2 ತಿಮೊಥೆಯನಿಗೆ 2:21
مراجع Treasury of Scripture Knowledge في ಕನ್ನಡ IRV.
ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!
ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.
ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.
ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.
ಆದ್ದರಿಂದ ದೇವರ ಮನುಷ್ಯನು ಎಲ್ಲವನ್ನೂ ಬಲ್ಲವನಾಗಿದ್ದು ಸಕಲಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
ಇದು ನಂಬತಕ್ಕ ಮಾತಾಗಿದೆ; ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಅದು ಉತ್ತಮವೂ, ಮನುಷ್ಯರಿಗೆ ಪ್ರಯೋಜನಕಾರಿಯೂ ಆಗಿವೆ.
ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.
ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ.