ಆತನು ಅವರಿಗೆ, ‹“ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ.›
TSK
TSK · 2 ತಿಮೊಥೆಯನಿಗೆ 2:5
مراجع Treasury of Scripture Knowledge في ಕನ್ನಡ IRV.
ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಮನಸ್ಸಿನಿಂದ ಮತ್ತು ಬೇರೆ ಕೆಲವರು ಒಳ್ಳೆಯ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.
ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.
ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ.
¶ ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.
‹ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ,›‹ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು›‹ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು.›‹ನೀನು ಸಾಯುವ ತನಕ›‹ನಂಬಿಗಸ್ತನಾಗಿರು, ನಾನು ನಿನಗೆ›‹ಜೀವದ ಕಿರೀಟವನ್ನು ಕೊಡುವೆನು.›
ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.