TSK

TSK · 2 ತಿಮೊಥೆಯನಿಗೆ 2:7

مراجع Treasury of Scripture Knowledge في ಕನ್ನಡ IRV.

العودة إلى المقطع

¶ “ಬೆಚಲೇಲನು ಹಾಗೂ ಒಹೋಲೀಯಾಬನು ಮತ್ತು ಬೇರೆ ಜ್ಞಾನಿಗಳೆಲ್ಲರು ಅಂದರೆ ಯೆಹೋವನಿಂದ ಜ್ಞಾನವಿವೇಕಗಳನ್ನು ಹೊಂದಿ ಪವಿತ್ರ ದೇವಮಂದಿರವನ್ನು ನಿರ್ಮಾಣ ಮಾಡುವ ಕೆಲಸಕ್ಕಾಗಿ ಬೇಕಾದ ಸಕಲವಿಧವಾದ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನೂ ಮಾಡುವರು” ಅಂದನು.

ನೀವು ಇದನ್ನೆಲ್ಲಾ ಆಲೋಚಿಸಿ ಆಕಾಶದಲ್ಲಿಯೂ ಮತ್ತು ಭೂಮಿಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುವುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು.

ನೀನು ನಿನ್ನ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೈಕೊಳ್ಳುವಂತೆ ಆತನು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಿ, ಇಸ್ರಾಯೇಲರನ್ನು ಆಳುವುದಕ್ಕೆ ನಿನ್ನನ್ನು ನೇಮಿಸಲಿ.

ಸೊಲೊಮೋನನು ದೇವರಿಗೆ, “ನೀನು ನನ್ನ ತಂದೆಯಾದ ದಾವೀದನಿಗೆ ಮಹಾ ದಯೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಅರಸನಾಗುವಂತೆ ಮಾಡಿದೆ.

ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು, ನಿನ್ನ ಆಜ್ಞೆಗಳನ್ನು ಕಲಿಯುವುದಕ್ಕೆ ನನಗೆ ಬುದ್ಧಿಯನ್ನು ಕೊಡು.

ನಿನ್ನ ಕಟ್ಟಳೆಗಳು ಸದಾಕಾಲವೂ ನೀತಿಯುಳ್ಳವುಗಳು, ನನಗೆ ವಿವೇಕವನ್ನು ದಯಪಾಲಿಸು, ಆಗ ಬದುಕುವೆನು.

ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.

ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ, ತಿದ್ದುತ್ತಾನೆ.

¶ ‹“ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು”› ಎಂದು ಹೇಳಿದನು.

ಆ ಮೇಲೆ ಅವರು ಶಾಸ್ತ್ರ ವಚನಗಳನ್ನು ತಿಳಿದುಕೊಳ್ಳುವಂತೆ ಆತನು ಅವರ ಮನಸ್ಸುಗಳನ್ನು ತೆರೆದನು.

‹ಆದರೆ›‹ಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು.›

ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು

¶ ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.

ಈ ಕಾರ್ಯಗಳನ್ನು ಸಾಧಿಸುತ್ತಾ, ಅವುಗಳಲ್ಲಿ ಮಗ್ನನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವುದು.

ಈತನು ಎಷ್ಟು ಮಹಾನ್ ಆಗಿದ್ದನೆಂದು ಯೋಚಿಸಿರಿ. ನಮ್ಮ ಮೂಲಪಿತೃವಾದ ಅಬ್ರಹಾಮನು ತಾನು ಯುದ್ಧದಲ್ಲಿ ಗೆದ್ದು ತಂದ ಶ್ರೇಷ್ಠ ವಸ್ತುಗಳಲ್ಲಿ ಹತ್ತರಲ್ಲಿ ಒಂದು ಭಾಗವನ್ನು ಅವನಿಗೆ ಕೊಟ್ಟನಲ್ಲಾ.

ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ.

ಅದು ಮೇಲಿಂದ ಬಂದ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು, ಲೌಕಿಕವಾದುದು, ದೆವ್ವಗಳಿಗೆ ಸಂಬಂಧಪಟ್ಟದ್ದು.

ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.