ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು.
TSK
TSK · 2 ತಿಮೊಥೆಯನಿಗೆ 3:11
مراجع Treasury of Scripture Knowledge في ಕನ್ನಡ IRV.
ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಂದ ತಪ್ಪಿಸಿ ಉನ್ನತಪಡಿಸುತ್ತಿ. ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತಿ.
ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.
ನಾನು ಯೆಹೋವನಿಗೆ, “ನೀನೇ ನನ್ನ ಶರಣನು, ನನ್ನ ದುರ್ಗವು, ನಾನು ಭರವಸವಿಟ್ಟಿರುವ ನನ್ನ ದೇವರು” ಎಂದು ಹೇಳುವೆನು.
ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.
ಆತನು ಉದ್ಧರಿಸುವವನೂ, ರಕ್ಷಿಸುವವನೂ, ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡೆಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದನು.”
¶ ಅನೇಕ ದಿನಗಳು ಕಳೆದ ಮೇಲೆ, ಯೆಹೂದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.
¶ ಇಕೋನ್ಯದಲ್ಲಿ ಪೌಲ ಮತ್ತು ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಪ್ರೇರಣಾತ್ಮಕವಾದ ಬೋಧನೆ ನೀಡಿ ಮಾತನಾಡಿದ್ದರಿಂದ ಯೆಹೂದ್ಯರಲ್ಲಿಯೂ, ಗ್ರೀಕರಲ್ಲಿಯೂ ಬಹುಮಂದಿ ಕರ್ತನಾದ ಯೇಸುಕ್ರಿಸ್ತನನ್ನು ನಂಬುವವರಾದರು.
¶ ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.
ನಿನಗೆ ಬೇಡಿಗಳೂ, ಹಿಂಸೆಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಎಚ್ಚರಿಕೆ ನೀಡಿದ್ದಾನೆ ಎಂಬುದನ್ನು ಬಲ್ಲೆನು.
ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು.
ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು.
ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.
ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣದ ತೀರ್ಪು ಹೊಂದಿದವರಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ. ನಾವು ಲೋಕದಲ್ಲಿ ದೇವದೂತರಿಗೂ, ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ಹಾಸ್ಯಾಸ್ಪದವಾದ ನೋಟವಾದೆವು.
ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ.
ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.
ಕೆಲವು ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ ಹಾಸ್ಯಕ್ಕೆ ಗುರಿಯಾದಿರಿ. ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ.