ಯೆಹೋವನೇ ನಮ್ಮಿಬ್ಬರ ಮಧ್ಯೆ ವ್ಯಾಜ್ಯವನ್ನು ತೀರಿಸಲಿ. ಆತನೇ ನನಗೋಸ್ಕರ ನಿನಗೆ ಮುಯ್ಯಿ ತೀರಿಸಲಿ. ನಾನಂತೂ ನಿನಗೆ ವಿರೋಧವಾಗಿ ಕೈಯೆತ್ತುವುದಿಲ್ಲ.
TSK
TSK · 2 ತಿಮೊಥೆಯನಿಗೆ 4:14
مراجع Treasury of Scripture Knowledge في ಕನ್ನಡ IRV.
ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.
ಉಪಕಾರಕ್ಕೆ ಅಪಕಾರವನ್ನು ಮಾಡಿದ್ದಾರೆ; ನಾನು ಪ್ರೀತಿಸಿದ್ದಕ್ಕೆ ಪ್ರತಿಯಾಗಿ ನನ್ನನ್ನು ದ್ವೇಷಿಸಿದ್ದಾರೆ.
ಅದಕ್ಕೆ ನಾನು, “ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು; ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು. ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ. ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಜ್ಞಾಪಕಕ್ಕೆ ತಂದುಕೋ.
ಯೆಹೋವನೇ, ಅವರ ದುಷ್ಕೃತ್ಯಗಳಿಗೆ ಸರಿಯಾದ ಪ್ರತಿಫಲವನ್ನು ನೀನು ಅವರಿಗೆ ಕೊಡುವಿ;
ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.
ಹುಮೆನಾಯನೂ ಅಲೆಕ್ಸಾಂದರನೂ ಇಂಥವರೇ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
ಅವರು, “ಸರ್ವಶಕ್ತನಾದ ಕರ್ತನೇ, ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ ಭೂಲೋಕ ನಿವಾಸಿಗಳಿಗೆ ನೀನು ಇನ್ನೆಷ್ಟು ಸಮಯ ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು.
ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.