“ನಿನಗೆ ನಂಬಿಗಸ್ತನಾಗಿಯೂ, ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾ ಕೃಪೆಯನ್ನು ತೋರಿಸಿದ್ದೀ. ಅವನ ಮೇಲೆ ಬಹಳವಾಗಿ ಕೃಪೆಯಿಟ್ಟು ಈಹೊತ್ತು ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಸಂಪೂರ್ಣಗೊಳಿಸಿರುವೆ.
TSK
TSK · 3 ಯೋಹಾನನು 1:4
مراجع Treasury of Scripture Knowledge في ಕನ್ನಡ IRV.
ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.
ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ.
ಆಗ ಯೇಸು ಅವರಿಗೆ, ‹“ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.›
ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?”
ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವುದೇನೆಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಉಂಟಾಗಲಿ.
ನಾನು ಸೆರೆಯಲ್ಲಿ ಬಂಧಿಯಾಗಿರುವಾಗ ನನ್ನ ಮಗನಂತೆ ಬಂದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ.