ಪೂರ್ವದಲ್ಲಿ ನಿನಗಿದ್ದ ನ್ಯಾಯಾಧಿಪತಿಗಳನ್ನು, ಮಂತ್ರಾಲೋಚಕರನ್ನು ಪುನಃ ಒದಗಿಸಿಕೊಡುವೆನು. ಆ ಮೇಲೆ ನೀನು ಸದಾಚಾರದ ನಗರಿ ಎಂತಲೂ, ಸ್ವಾಮಿ ನಿಷ್ಠೆಯುಳ್ಳ ನಗರಿ ಎಂತಲೂ ಕರೆಯಲ್ಪಡುವಿ.”
TSK
TSK · ಅಪೊಸ್ತಲರ ಕೃತ್ಯಗ 1:6
مراجع Treasury of Scripture Knowledge في ಕನ್ನಡ IRV.
ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.
ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೆನು. ನಾನು ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.”
ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.
ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇಮಿನಿಂದ ಧ್ವನಿಗೈಯುತ್ತಾನೆ. ಭೂಮಿ ಹಾಗು ಆಕಾಶಗಳು ನಡುಗುತ್ತವೆ, ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ, ಮತ್ತು ಇಸ್ರಾಯೇಲರಿಗೆ ರಕ್ಷಣದುರ್ಗವೂ ಆಗಿರುವನು.
ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು, ಆ ಪರ್ವತವು ಪರಿಶುದ್ಧವಾಗಿರುವುದು; ಯಾಕೋಬನ ವಂಶದವರು ತಮ್ಮ ಸ್ವತ್ತುಗಳನ್ನು ಅನುಭವಿಸುವರು.
ನಿನಗೆ ವಿಧಿಸಿದ ದಂಡನೆಯನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ.
ಯೇಸು ಅವರಿಗೆ,‹“ಎಲೀಯನು ಮೊದಲು ಬರುವುದು ನಿಜ. ಬಂದು ಎಲ್ಲವನ್ನು ಪುನಃ ಸ್ಥಾಪಿಸುವನು.›
¶ ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು
¶ ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ, ‹“ದೇವರ ರಾಜ್ಯವು ನೀವು ಗಮನಿಸುತ್ತಾ ಕಾಯುತ್ತಿರುವಾಗ ಪ್ರತ್ಯಕ್ಷವಾಗಿ ಬರುವಂಥದಲ್ಲ.›
‹ಆದುದರಿಂದ ನನ್ನ ತಂದೆಯು ನನಗೆ ರಾಜ್ಯವನ್ನು ನೇಮಿಸಿರುವ ಪ್ರಕಾರ ನಾನು ನಿಮಗೂ ನೇಮಿಸುತ್ತೇನೆ;›