TSK

TSK · ಅಪೊಸ್ತಲರ ಕೃತ್ಯಗ 1:8

مراجع Treasury of Scripture Knowledge في ಕನ್ನಡ IRV.

العودة إلى المقطع

ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.

ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.

ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ. ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು.

¶ ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.

¶ ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.

‹ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.›

ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.

ಆದರೆ ಅವರು, “ನಮ್ಮ ಸಂಗಡ ಇರು. ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂದಿತು” ಎಂದು ಆತನಿಗೆ ಹೇಳಿ ಬಲವಂತ ಮಾಡಲು, ಆತನು ಅವರ ಕೂಡ ಇರುವುದಕ್ಕೆ ಹೋದನು.

‹ನೀವು ಮೊದಲಿನಿಂದ ನನ್ನ ಸಂಗಡ ಇದ್ದುದರಿಂದ ನೀವೂ ಸಹ ನನಗೆ ಸಾಕ್ಷಿಗಳಾಗಿದ್ದೀರಿ.›

ಮತ್ತು ಕರ್ತನಾದ ಯೇಸುವಿನ ಪುನರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರೆಲ್ಲರ ಮೇಲೆ ಪೂರ್ಣವಾಗಿತ್ತು.

¶ ಸ್ತೆಫನನು ದೇವರ ಕೃಪೆಯಿಂದಲೂ, ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹಾ ಅದ್ಭುತ ಕಾರ್ಯಗಳನ್ನೂ, ಸೂಚಕಕಾರ್ಯಗಳನ್ನೂ ಮಾಡುತ್ತಾ ಇದ್ದನು.

ಫಿಲಿಪ್ಪನು ಸಮಾರ್ಯವೆಂಬ ಪಟ್ಟಣಕ್ಕೆ ಹೋಗಿ ಕ್ರಿಸ್ತನ ವಿಷಯವಾಗಿ ಅಲ್ಲಿರುವವರಿಗೆ ಪ್ರಚುರಪಡಿಸಿದನು.

ಮತ್ತು ಆತನು ಗಲಿಲಾಯದಿಂದ ಯೆರೂಸಲೇಮಿಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿನಗಳವರೆಗೂ ಕಾಣಿಸಿಕೊಂಡನು; ಈಗ ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.

ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”

ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.