‹ಅವನ ಹೃದಯದೊಳಕ್ಕೆ ಸೇರದೆ ಹೊಟ್ಟೆಯಲ್ಲಿ ಸೇರಿ, ಬಳಿಕ ಹೊರಗೆ ವಿಸರ್ಜಿಸಲ್ಪಡುತ್ತದೆ. ಅವು ಅವನನ್ನು ಅಶುದ್ಧ ಮಾಡಲಾರದೆಂದು ನಿಮಗೆ ಅರ್ಥವಾಗುವುದಿಲ್ಲವೋ?”› ಎಂದು ಹೇಳಿದನು. ಹೀಗೆ ಹೇಳಿದ್ದರಿಂದ ಆಹಾರ ಪದಾರ್ಥಗಳೆಲ್ಲಾ ಶುದ್ಧವೆಂದು ಯೇಸು ಸೂಚಿಸಿದನು.
TSK
TSK · ಅಪೊಸ್ತಲರ ಕೃತ್ಯಗ 10:15
مراجع Treasury of Scripture Knowledge في ಕನ್ನಡ IRV.
¶ ಅದಕ್ಕೆ; ‹“ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆ ಎನ್ನಬಾರದು”› ಎಂಬುದಾಗಿ ಎರಡನೆಯ ಸಾರಿಯೂ ಆಕಾಶದಿಂದ ವಾಣಿಯಾಯಿತು.
ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು.
ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವುದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವಾಗಿರಲಿ.
ಮಾಂಸದ ಅಂಗಡಿಯಲ್ಲಿ ಮಾರುವಂಥದ್ದು ಏನಿದ್ದರೂ ಅದನ್ನು ಮನಸ್ಸಾಕ್ಷಿಯಲ್ಲಿ ಸಂಶಯ ಹುಟ್ಟಿಸುವಂತೆ ವಿಚಾರ ಮಾಡದೇ ತಿನ್ನಿರಿ.
ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು.
ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನೆಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸ್ಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ.
ಆಗ ಆಲೆಯನ್ನು ಪಟ್ಟಣದ ಹೊರಗೆ ತೆಗೆದುಕೊಂಡು ಹೋಗಿ ತುಳಿದರು. ಆ ಆಲೆಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಮೇಲಕ್ಕೆ ಬಂದು ಮುನ್ನೂರು ಕಿಲೋಮೀಟರಿನಷ್ಟು ದೂರ ಹರಿಯಿತು.