¶ ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.
TSK
TSK · ಅಪೊಸ್ತಲರ ಕೃತ್ಯಗ 10:34
مراجع Treasury of Scripture Knowledge في ಕನ್ನಡ IRV.
ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.
ಆತನು ಅವರಿಗೆ ಉಪದೇಶ ಮಾಡಿ ಹೇಳಿದ್ದೇನೆಂದರೆ,
ಗೂಢಚಾರರು, “ಬೋಧಕನೇ, ನೀನು ಸರಿಯಾಗಿ ಮಾತನಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು.
ದೇವರಲ್ಲಿ ಪಕ್ಷಪಾತವಿಲ್ಲ.
¶ ಯಜಮಾನರೇ, ನಿಮ್ಮ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ.
ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.
ನೀವು ನಿಮ್ಮ ನಿಮ್ಮಲ್ಲಿ ಭೇದಭಾವ ಮಾಡುವವರಾಗಿದ್ದು, ತಾರತಮ್ಯ ಆಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ?
¶ ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.