‹ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.›
TSK
TSK · ಅಪೊಸ್ತಲರ ಕೃತ್ಯಗ 11:27
مراجع Treasury of Scripture Knowledge في ಕನ್ನಡ IRV.
¶ ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.
ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಏಳು ದಿನ ಉಳಿದುಕೊಂಡೆವು. ಅವರು ದೇವರಾತ್ಮನ ಪ್ರೇರಣೆಯಿಂದ ಪೌಲನಿಗೆ; ನೀನು ಯೆರೂಸಲೇಮಿಗೆ ಕಾಲಿಡಬೇಡವೆಂದು ಹೇಳಿದರು.
ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.
ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.