ಎಲ್ಲಾ ದೇವಭಕ್ತರೇ, ಬಂದು ಕೇಳಿರಿ; ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು.
TSK
TSK · ಅಪೊಸ್ತಲರ ಕೃತ್ಯಗ 12:17
مراجع Treasury of Scripture Knowledge في ಕನ್ನಡ IRV.
ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.
ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ, ಹಸಿದವರಿಗೆ ಆಹಾರ ಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ.
ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತನಾಡಲಾರದೆ ಇರಲು ಅವರು, ಇವನಿಗೆ ದೇವಾಲಯದಲ್ಲಿ ಏನೋ ದಿವ್ಯ ದರ್ಶನವಾಗಿರಬೇಕು ಎಂದು ತಿಳಿದುಕೊಂಡರು. ಜಕರೀಯನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು.
ಆಗ ಅವರು ಆತನ ಮೇಲೆ ಎಸೆಯಲು, ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಮರೆಯಾಗಿ ದೇವಾಲಯದೊಳಗಿನಿಂದ ಹೊರಗೆ ಹೊರಟು ಹೋದನು.
ಹೀಗಿರಲಾಗಿ ಯೇಸು ಇನ್ನೂ ಯೆಹೂದ್ಯರೊಳಗೆ ಬಹಿರಂಗವಾಗಿ ತಿರುಗಾಡದೆ, ಅಲ್ಲಿಂದ ಅಡವಿಯ ಹತ್ತಿರದ ಪ್ರದೇಶಕ್ಕೆ ಹೋಗಿ, ಎಫ್ರಾಯೀಮ್ ಎಂಬ ಊರಲ್ಲಿ ತನ್ನ ಶಿಷ್ಯರ ಜೊತೆ ಇದ್ದನು.
ಆಗ ಪೌಲನು ಎದ್ದು ಕೈಸನ್ನೆ ಮಾಡಿ ಹೇಳಿದ್ದೇನಂದರೆ;
ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಅಲ್ಲಿಂದ ಹೊರಟುಹೋದರು.
ಮರುದಿನ ಪೌಲನು ನಮ್ಮನ್ನು ಕರೆದುಕೊಂಡು ಯಾಕೋಬನ ಬಳಿಗೆ ಹೋದನು. ಸಭೆಯ ಹಿರಿಯರೆಲ್ಲರು ಸಹ ಬಂದರು.
ತರುವಾಯ ಆತನು ಯಾಕೋಬನಿಗೂ ಅನಂತರ ಎಲ್ಲಾ ಅಪೊಸ್ತಲರಿಗೂ ಕಾಣಿಸಿಕೊಂಡನು.
ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.
¶ ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದುರಿರುವ ಇಸ್ರಾಯೇಲ್ಯರ ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, “ನಿಮಗೆ ಶುಭವಾಗಲಿ.”