¶ ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.
TSK
TSK · ಅಪೊಸ್ತಲರ ಕೃತ್ಯಗ 13:2
مراجع Treasury of Scripture Knowledge في ಕನ್ನಡ IRV.
¶ ಯೆಹೋವನ ಮಂಜೂಷದ ಮುಂದೆ ದೇವರಾಧನೆ ನಡಿಸುವುದಕ್ಕೋಸ್ಕರ ದಾವೀದನು ಕೆಲವು ಲೇವಿಯರನ್ನು ನೇಮಿಸಿದನು. ಇಸ್ರಾಯೇಲಿನ ದೇವರಾದ ಯೆಹೋವನನ್ನು ಸ್ತುತಿಸುವುದೂ, ಹಾಡಿ ಹರಸುವುದೂ ಅವರ ಕರ್ತವ್ಯವಾಗಿತ್ತು.
ನಾನು ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ, ವಿಜ್ಞಾಪನೆಗಳಲ್ಲಿ ನಿರತನಾದೆನು.
¶ ನಂತರ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು, “ಫರಿಸಾಯರೂ ನಾವೂ ಬಹಳಸಾರಿ ಉಪವಾಸಮಾಡುತ್ತೇವೆ; ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ,
‹ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಅಲ್ಲಿಗೆ ಸರಿದು ಹೋಗು’ ಎಂದು ಹೇಳಿದರೂ ಅದು ಹೋಗುವುದು ಮತ್ತು ನಿಮಗೆ ಅಸಾಧ್ಯವಾದುದು ಒಂದೂ ಇರುವುದಿಲ್ಲ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆತನು, ಈ ರೀತಿಯ ದೆವ್ವಗಳು ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವರೀತಿಯಿಂದಲೂ ಇವುಗಳು ಬಿಟ್ಟು ಹೋಗುವುದಿಲ್ಲವೆಂದು ಅವರಿಗೆ ಹೇಳಿದನು.›
¶ ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.
ದೇವರಾತ್ಮನು ಫಿಲಿಪ್ಪನಿಗೆ, “ನೀನು ಆ ರಥದ ಹತ್ತಿರ ಹೋಗಿ ಅದರೊಂದಿಗೆ ಸೇರಿ ನಡೆ” ಎಂದು ಹೇಳಿದನು.
ಪೇತ್ರನು ಆ ದರ್ಶನದ ಕುರಿತಾಗಿ ಯೋಚನೆ ಮಾಡುತ್ತಿರಲು ದೇವರಾತ್ಮನು ಅವನಿಗೆ; “ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;
ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು.
¶ ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,
ಆದರೆ ಆತನು; ‹‘ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು’”› ಹೇಳಿದನು.
ಇದಕ್ಕೆ ಸರಿಯಾಗಿ “ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ.
ಪ್ರಾರ್ಥನೆಗೆ ಸಮಯ ಕೊಡುವುದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪ ಕಾಲ ಅಗಲಿ ಇರಬಹುದೇ ಹೊರತು ಅನ್ಯತಾ ಹಾಗೆ ಮಾಡಬಾರದು. ಸೈತಾನನು ನಿಮಗೆ ಸ್ವಯಂ ನಿಯಂತ್ರಣವಿಲ್ಲದಿರುವುದನ್ನು ನೋಡಿ ನಿಮಗೆ ದುಷ್ಪ್ರೇರಣೆಗೆ ಎಡೆ ಮಾಡದಂತೆ ತಿರುಗಿ ಕೂಡಿಕೊಳ್ಳಿರಿ.
ದೊಂಬಿ, ಕಲಹ, ಸೆರೆಮನೆ, ಶಿಕ್ಷೆ ಇವುಗಳನ್ನು ಅನುಭವಿಸಿದ್ದೇವೆ. ಮೈಮುರಿದು ಕೆಲಸ ಮಾಡಿದ್ದೇವೆ. ನಿದ್ದೆಗೆಟ್ಟು ಬಳಲಿದ್ದೇವೆ; ಹಸಿವಿನಲ್ಲಿ ಸೊರಗಿದ್ದೇವೆ; ಈ ಎಲ್ಲಾ ವಿಷಯಗಳಲ್ಲಿ ಬಹು ಸಮಾಧಾನವನ್ನು ತೋರಿಸಿದ್ದೇವೆ.
¶ ಆದರೆ ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತನ್ನ ಕೃಪೆಯಿಂದ ಕರೆದ ದೇವರು,
ದೇವರು ತನ್ನ ಶಕ್ತಿಯ ಪ್ರಯೋಗದ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.
ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ.
ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು.
ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ, ಅವನು ನನಗೆ ಸೇವೆಯಲ್ಲಿ ಉಪಯುಕ್ತನಾಗಿದ್ದಾನೆ.