TSK

TSK · ಅಪೊಸ್ತಲರ ಕೃತ್ಯಗ 13:20

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನ ಆತ್ಮವು ಅವನ ಮೇಲೆ ಬಂದುದರಿಂದ ಅವನು ಇಸ್ರಾಯೇಲರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದ್ದರಿಂದ ಅವನು ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.

ಯೆಹೋವನು ಅವನನ್ನು ತನ್ನ ಪ್ರವಾದಿಯನ್ನಾಗಿ ನೇಮಿಸಿಕೊಂಡದ್ದು ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲಾ ಇಸ್ರಾಯೇಲರಿಗೆ ಗೊತ್ತಾಯಿತು.

ಪೂರ್ವಕಾಲದಲ್ಲೂ ನಾನು ನನ್ನ ಜನರಾದ ಇಸ್ರಾಯೇಲರಿಗಾಗಿ ನೇಮಿಸಿದ ನ್ಯಾಯಸ್ಥಾಪಕರ ಕಾಲದಿಂದ ಇಲ್ಲಿಯವರೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವುದಿಲ್ಲ. ನೀನು ಶತ್ರುಭಯವಿಲ್ಲದೆ ನೆಮ್ಮದಿಯಿಂದಿರುವಂತೆ ಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ.

ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗೆಲ್ಲಾ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೋಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ನ್ಯಾಯಸ್ಥಾಪಕನ್ನಾದರೂ ನೀವು ನನಗೋಸ್ಕರ ದೇವದಾರುಮರದ ಮನೆಯನ್ನು ಏಕೆ ಕಟ್ಟಲಿಲ್ಲ ಎಂದು ಕೇಳಿದೆನೋ ಎಂಬುದಾಗಿ ಯೆಹೋವನು ಅನ್ನುತ್ತಾನೆ’” ಎಂದು ಹೇಳು ಎಂದನು.