TSK

TSK · ಅಪೊಸ್ತಲರ ಕೃತ್ಯಗ 13:22

مراجع Treasury of Scripture Knowledge في ಕನ್ನಡ IRV.

العودة إلى المقطع

ನೀವು ದ್ರೋಹಿಗಳಾಗಿಯೇ ಇದ್ದರೆ ನೀವು ಮತ್ತು ನಿಮ್ಮ ಅರಸನು ನಾಶವಾಗುವಿರಿ” ಎಂದು ಹೇಳಿದನು.

ಸಮುವೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವನಿಗೆ ಮೊರೆಯಿಟ್ಟನು.

ಅದಕ್ಕೆ ಸಮುವೇಲನು, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಯೆಹೋವನ ಮಾತನ್ನು ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಇಸ್ರಾಯೇಲರ ಅರಸುತನದಿಂದ ನಿವಾರಿಸಿದ್ದಾನೆ” ಎಂದು ಹೇಳಿ ತಿರುಗಿಕೊಂಡು ಹೊರಡಲು

¶ ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.

ಆಗ ಸಮುವೇಲನು, “ಯೆಹೋವನು ನಿನ್ನನ್ನು ಬಿಟ್ಟು ನಿನಗೆ ವಿರೋಧಿಯಾದ ಮೇಲೆ, ನೀನು ನನ್ನನ್ನು ವಿಚಾರಿಸುವುದೇಕೆ?

¶ ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ, ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದ್ ದೇಶದವರೇ ಎಂಬ ಸಂಗತಿಯು ದಾವೀದನಿಗೆ ಗೊತ್ತಾಯಿತು.

ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ‘ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು.

ತನ್ನ ತಂದೆಯು ಮಾಡಿದ ಎಲ್ಲಾ ಪಾಪಕೃತ್ಯಗಳನ್ನು ಅವನೂ ಮಾಡಿದನು. ಅವನ ಪೂರ್ವಿಕನಾದ ದಾವೀದನು ದೇವರಾದ ಯೆಹೋವನನ್ನು ಯಥಾರ್ಥಮನಸ್ಸಿನಿಂದ ಸೇವಿಸಿದಂತೆ ಅವನು ಸೇವಿಸಲಿಲ್ಲ.

ಇಸ್ರಾಯೇಲರ ದೇವರಾದ ಯೆಹೋವನು ತನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಾಯೇಲರ ಅರಸನಾಗುವುದಕ್ಕೆ ಆರಿಸಿಕೊಂಡನು. ಆತನು ಯೆಹೂದ ಕುಲವು ರಾಜಕುಲವಾಗಬೇಕೆಂದು ನೇಮಿಸಿ, ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡನು. ನನ್ನ ತಂದೆಯ ಎಲ್ಲಾ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದನು.

ಇದಲ್ಲದೆ ಆತನು ತನ್ನ ಸೇವಕನಾದ ದಾವೀದನನ್ನು ಆರಿಸಿಕೊಂಡು, ಕುರಿಹಟ್ಟಿಯಿಂದ ತೆಗೆದುಕೊಂಡು,

ಆಗ ನನ್ನ ದಾಸನಾದ ದಾವೀದನಿಗೂ, ನನ್ನ ಸೇವಕರಾಗಿರುವ ಲೇವಿಯರಾದ ಯಾಜಕರಿಗೂ ನಾನು ಮಾಡಿದ ನಿಬಂಧನೆಯು ನಿಂತು ಹೋಗಿ ದಾವೀದನ ಸಿಂಹಾಸನಾಸೀನನಾಗಿ ಆಳತಕ್ಕ ಅವನ ಸಂತಾನದವನೊಬ್ಬನೂ ಉಳಿಯದೆ ಹೋದಾನು.

¶ “‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.

ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.

ದಾವೀದನು ದೇವರ ಸನ್ನಿಧಾನದಲ್ಲಿ ಕೃಪೆ ಹೊಂದಿ ಯಾಕೋಬನ ವಂಶದವರಿಗೋಸ್ಕರ ದೇವಾಲಯವನ್ನು ಕಟ್ಟಿಸುವುದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡನು.

¶ ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ.