¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ.›
TSK
TSK · ಅಪೊಸ್ತಲರ ಕೃತ್ಯಗ 13:43
مراجع Treasury of Scripture Knowledge في ಕನ್ನಡ IRV.
‹ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.›
ಈ ಮಾತು ಸರ್ವರಿಗೂ ಒಳ್ಳೆಯದೆಂದು ತೋಚಿತು. ಅವರು ಪವಿತ್ರಾತ್ಮಭರಿತರೂ, ನಂಬಿಕೆಯಿಂದ ತುಂಬಿದವರೂ ಆದ ಸ್ತೆಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ, ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬುವವರನ್ನೂ ಆರಿಸಿಕೊಂಡು ಅಪೊಸ್ತಲರ ಮುಂದೆ ನಿಲ್ಲಿಸಿದರು.
ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.
ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.
ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು.
ಕೆಲವರು ಅವನನ್ನು ಸೇರಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನುಸ್ಯನೂ, ದಾಮರಿಯೆಂಬಾಕೆಯೂ ಹಾಗು ಇನ್ನೂ ಕೆಲವರೂ ಇದ್ದರು.
¶ ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.
ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.
ಕೃಪೆಯಿಂದ ಆರಿಸಿಕೊಂಡನು ಅಂದ ಮೇಲೆ ಒಳ್ಳೆಯ ಕಾರ್ಯದಿಂದಲ್ಲ. ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವುದಕ್ಕಾಗುವುದಿಲ್ಲ.
¶ ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.
ನಿಮ್ಮಲ್ಲಿ ಯಾರಾರು ಧರ್ಮಶಾಸ್ತ್ರದಿಂದ ನೀತಿವಂತರಾಗಬೇಕೆಂದು ಬಯಸಿದ್ದೀರೋ ಅವರು ಕ್ರಿಸ್ತನಿಂದ ಅಗಲಿಹೋದವರಾಗಿದ್ದೀರಿ. ಕೃಪೆಯಿಂದ ಬಿದ್ದಹೋದವರಾಗಿದ್ದೀರಿ.
ಅಂತೂ, ನಾವು ಯಾವ ಸೂತ್ರವನ್ನನುಸರಿಸಿ ಇಲ್ಲಿಯ ವರೆಗೆ ಬಂದೆವೋ ಅದನ್ನೇ ಅನುಸರಿಸಿ ನಡೆಯೋಣ.
ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.
ಸಂಕಟಗಳನ್ನು ಅನುಭವಿಸುವುದಕ್ಕಾಗಿಯೇ ನಾವು ನೇಮಿಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ.
ನಿರೀಕ್ಷೆಯ ಸಂಪೂರ್ಣ ನಿಶ್ಚಯತ್ವವನ್ನು ಹೊಂದುವುದಕ್ಕಾಗಿ ಅಂತ್ಯದವರೆಗೂ ನೀವು ಅದೇ ಶ್ರದ್ಧೆಯನ್ನು ತೋರಿಸಬೇಕೆಂದು ನಾನು ಬಹಳವಾಗಿ ಅಪೇಕ್ಷಿಸುತ್ತೇವೆ.
ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.
¶ ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.
ಪ್ರಿಯ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.