TSK

TSK · ಅಪೊಸ್ತಲರ ಕೃತ್ಯಗ 14:1

مراجع Treasury of Scripture Knowledge في ಕನ್ನಡ IRV.

العودة إلى المقطع

ಅದಕ್ಕೆ ಯೆಹೂದ್ಯರು “ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿದ್ದಾನೆ? ಗ್ರೀಕರ ನಡುವೆ ಚದುರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಬೋಧನೆ ಮಾಡಬೇಕೆಂದಿರುವನೋ?

ಅವನು ಕೂಡಲೇ, ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವುದಕ್ಕೆ ಪ್ರಾರಂಭಮಾಡಿದನು.

ಸಲಮೀಸ್ ಎಂಬ ಸ್ಥಳಕ್ಕೆ ಸೇರಿ ಅಲ್ಲಿ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಬೋಧಿಸಿದರು. ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯಕನಾಗಿ ಅವರ ಸಂಗಡ ಇದ್ದನು.

ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.

ಆದರೆ ನಂಬದೆ ಹೋದ ಯೆಹೂದ್ಯರು, ಅನ್ಯಜನರ ಮನಸ್ಸನ್ನು ಈ ಸಹೋದರರ ವಿರುದ್ಧವಾಗಿ ಪ್ರಚೋದಿಸಿ ಕೆಡಿಸಿದರು.

¶ ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.

ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು.

ಆದುದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಮತ್ತು ಯೆಹೂದ್ಯ ಮತಾವಲಂಬಿಗಳೊಂದಿಗೆ ಮತ್ತು ಪ್ರತಿದಿನ ಪೇಟೆಯಲ್ಲಿ ಕಂಡುಬಂದವರ ಸಂಗಡಲೂ ಚರ್ಚಿಸಿದನು.

ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡರು.

ಇದು ಎರಡು ವರ್ಷಗಳ ವರೆಗೂ ನಡೆದಿದ್ದರಿಂದ ಅಸ್ಯಸೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ, ಗ್ರೀಕರೂ, ಕರ್ತನ ವಾಕ್ಯವನ್ನು ಕೇಳಿದರು.

ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.

¶ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.

ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;

ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.