TSK

TSK · ಅಪೊಸ್ತಲರ ಕೃತ್ಯಗ 14:22

مراجع Treasury of Scripture Knowledge في ಕನ್ನಡ IRV.

العودة إلى المقطع

ಜೋಲುಬಿದ್ದ ಕೈಗಳನ್ನೂ, ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ.

‹ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದಿದ್ದರೆ ನನ್ನ ಶಿಷ್ಯನಾಗಲು ಯೋಗ್ಯನಲ್ಲ.›

‹“ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ನಿಮಗೆ ತಿರುಗಿ ಹೇಳುತ್ತೇನೆ”› ಅಂದನು.

ಶಿಷ್ಯರು ಆತನ ಮಾತುಗಳನ್ನು ಕೇಳಿ ಅಶ್ಚರ್ಯಪಟ್ಟರು. ಆದರೆ ಯೇಸು ಪುನಃ ಅವರಿಗೆ, ‹“ಮಕ್ಕಳೇ,›‹ದೇವರ ರಾಜ್ಯದಲ್ಲಿ ಸೇರುವುದು ಬಹಳ ಕಷ್ಟ.›

‹ನೀವು ನನ್ನ ಕಷ್ಟಗಳಲ್ಲಿ ನನ್ನ ಸಂಗಡ ಎಡೆಬಿಡದೆ ಇದ್ದವರು.›

ಅದಕ್ಕೆ ಯೇಸು ‹“ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.›

‹ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.›

¶ ‹“ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ.›

¶ ‹“ನೀವು ನಂಬಿಕೆಯಿಂದ ಎಡವಿ ಬಿದ್ದು ಹೋಗಬಾರದೆಂದು ನಾನು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.›

¶ ದೇವರ ವಾಕ್ಯವು ಪ್ರಬಲವಾಯಿತು; ಶಿಷ್ಯರ ಸಂಖ್ಯೆಯು ಯೆರೂಸಲೇಮಿನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂದಿತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತ ನಂಬಿಕೆಗೆ ಒಳಗಾಗುತ್ತಾ ಬಂದರು.

ಯೂದನೂ, ಸೀಲನೂ ತಾವೇ ಪ್ರವಾದಿಗಳಾಗಿದ್ದುದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಉತ್ತೇಜಿಸಿ ದೃಢಪಡಿಸಿದರು.

¶ ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ಪುನಃ ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ, ಫ್ರುಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು.

ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು ಕಡೆಯವರೆಗೂ ದೃಢಪಡಿಸುವನು.

ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ಉತ್ತೇಜನಪಡಿಸುವುದಕ್ಕೂ ನಮ್ಮ ಸಹೋದರನೂ, ಕ್ರಿಸ್ತನ ಸುವಾರ್ತೆಯ ಕಾರ್ಯದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.

¶ ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.

ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.

ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.

¶ ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.

¶ ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.

ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.