TSK

TSK · ಅಪೊಸ್ತಲರ ಕೃತ್ಯಗ 14:26

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗಲ್ಲದೇ ಮತ್ತಾರಿಗೂ ದೇವರ ವಾಕ್ಯವನ್ನು ಹೇಳದೆ ಫೊಯಿನಿಕೆ, ಕುಪ್ರ ಹಾಗೂ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.

¶ ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.

¶ ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,

ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಅಲ್ಲಿಂದ

ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ.

¶ ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.

ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ.

ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.

ಅವರು ಸಭೆಯ ಮುಂದೆ ನೀನು ತೋರಿಸಿದ ಪ್ರೀತಿಯ ಕುರಿತು ಸಾಕ್ಷಿ ಹೇಳಿದ್ದಾರೆ. ಅವರು ತಮ್ಮ ಸಂಚಾರವನ್ನು ಇನ್ನೂ ಮುಂದುವರಿಸುವಂತೆ ದೇವರು ಮೆಚ್ಚುವ ರೀತಿಯಲ್ಲಿ ನೀನು ನೆರವಾಗಬೇಕು.