¶ ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.
TSK
TSK · ಅಪೊಸ್ತಲರ ಕೃತ್ಯಗ 14:27
مراجع Treasury of Scripture Knowledge في ಕನ್ನಡ IRV.
¶ ಗುಂಪುಸೇರಿದ್ದವರೆಲ್ಲರೂ ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು.
ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವುದಕ್ಕಾಗಿ ನನ್ನ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ, ಸೂಚಕಕಾರ್ಯಗಳ, ಅದ್ಭುತಕಾರ್ಯಗಳ ಬಲದಿಂದಲೂ, ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು.
ನಮ್ಮ ಕರ್ತನಾದ ಯೇಸುವಿನ ನಾಮದಲ್ಲಿ ನೀವೆಲ್ಲರೂ ಸೇರಿ ಬರುವಾಗ ನಾನು ಆತ್ಮದಿಂದ ನಿಮ್ಮೊಂದಿಗಿರುತ್ತೇನೆ ಹಾಗೂ
ಹೀಗಿರುವಲ್ಲಿ ಸಭೆಯೆಲ್ಲಾ ಒಂದೇ ಸ್ಥಳದಲ್ಲಿ ಸೇರಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ ಈ ಭಾಷೆಯನ್ನು ತಿಳಿಯದ ಬೇರೆಯವರು ಅಥವಾ ಕ್ರಿಸ್ತ ನಂಬಿಕೆಯಿಲ್ಲದವರು ಒಳಗೆ ಬಂದು ನೋಡಿ, ನಿಮಗೆ ಹುಚ್ಚು ಹಿಡಿದಿದೆ ಎಂದು ಹೇಳುವುದಿಲ್ಲವೋ?
ಯಾಕೆಂದರೆ ಸೇವೆಗೆ ಅನುಕೂಲವೂ, ಸಫಲವೂ ಆಗಿರುವ ಹೆಬ್ಬಾಗಿಲೊಂದು ನನಗಾಗಿ ತೆರೆಯಲ್ಪಟ್ಟಿದೆ. ಹಾಗೆಯೇ ವಿರೋಧಿಗಳೂ ಅನೇಕರಿದ್ದಾರೆ.
ಕ್ರಿಸ್ತನ ಮರ್ಮವನ್ನು ಅಂದರೆ ಸುರ್ವಾತೆಯನ್ನು ನಾವು ಸಾರುವುದಕ್ಕೆ ದೇವರು ನಮಗೆ ಬಾಗಿಲನ್ನು ತೆರೆದು ಕೊಡುವುದಕ್ಕಾಗಿ ನಮಗೋಸ್ಕರವಾಗಿ ಪ್ರಾರ್ಥಿಸಿರಿ. ಈ ಸುರ್ವಾತೆಯ ನಿಮಿತ್ತವೇ ನಾನು ಸೆರೆಯಲ್ಲಿದ್ದೇನಲ್ಲಾ.