¶ ಚದರಿಹೋದವರು ಅಲ್ಲಲ್ಲಿ ಹೋಗಿ ಸುವಾರ್ತೆಯನ್ನು ಸಾರುತ್ತಿದ್ದರು.
TSK
TSK · ಅಪೊಸ್ತಲರ ಕೃತ್ಯಗ 14:7
مراجع Treasury of Scripture Knowledge في ಕನ್ನಡ IRV.
“ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.
ಅವನಿಗೆ ಆ ದರ್ಶನವಾದ ಮೇಲೆ, ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು, ಕೂಡಲೆ ಮಕೆದೋನ್ಯಕ್ಕೆ ಹೊರಟುಹೋಗುವ ಪ್ರಯತ್ನಮಾಡಿದೆವು.
ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ.