TSK

TSK · ಅಪೊಸ್ತಲರ ಕೃತ್ಯಗ 15:29

مراجع Treasury of Scripture Knowledge في ಕನ್ನಡ IRV.

العودة إلى المقطع

ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರವು. ಆದಕಾರಣ ನಾನು ಇಸ್ರಾಯೇಲರಿಗೆ, ಪ್ರತಿಪ್ರಾಣಿಗೂ ರಕ್ತವೇ ಪ್ರಾಣಾಧಾರವಾದುದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನು ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರವಾಗಬೇಕೆಂದು ಆಜ್ಞಾಪಿಸಿದ್ದೇನೆ.

ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು.

ಅನ್ಯಜನರಲ್ಲಿ ಯೇಸುವನ್ನು ನಂಬಿರುವವರ ಕುರಿತಾದರೋ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕತ್ತು ಹಿಸುಕಿ ಕೊಂದದ್ದನ್ನೂ ಅನೈತಿಕತೆಯನ್ನೂ ಬಿಟ್ಟು ದೂರವಾಗಿರಬೇಕೆಂಬುದಾಗಿ ನಾವು ತೀರ್ಮಾನಿಸಿದ ನಿಯಮಗಳನ್ನು ಬರೆದು ಕಳುಹಿಸಿದೆವಲ್ಲಾ” ಎಂದು ಹೇಳಿದರು.

ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವುದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವಾಗಿರಲಿ.

ಇಸ್ರಾಯೇಲ್ಯ ಜನರ ಕುರಿತು ಯೋಚಿಸಿರಿ. ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಪಾಲುಗಾರರಾಗಿದ್ದಾರಲ್ಲವೇ.

¶ ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.

ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.

ಪ್ರಿಯರೇ, ನೀವಾದರೋ ನಿಮಗಿರುವ ಅತಿ ಪರಿಶುದ್ಧವಾದ ಕ್ರಿಸ್ತ ನಂಬಿಕೆಯನ್ನು ಆಧಾರವಾಗಿಟ್ಟುಕೊಂಡು ಅಭಿವೃದ್ಧಿಹೊಂದುತ್ತಾ, ಪವಿತ್ರಾತ್ಮಪ್ರೇರಿತರಾಗಿ ಪ್ರಾರ್ಥನೆ ಮಾಡಿರಿ.

‹ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ.›‹ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ›‹ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು›‹ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.›