ಜೋಲುಬಿದ್ದ ಕೈಗಳನ್ನೂ, ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ.
TSK
TSK · ಅಪೊಸ್ತಲರ ಕೃತ್ಯಗ 15:32
مراجع Treasury of Scripture Knowledge في ಕನ್ನಡ IRV.
‹ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.›
“ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;
ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.
¶ ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.
¶ ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು; “ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು” ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.
ಹೊರಟು ಸಿರಿಯ ಮತ್ತು ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.
ಆ ಸೀಮೆಯಲ್ಲಿ ಸಂಚಾರಮಾಡಿ ಅಲ್ಲಿಯವರನ್ನು ಅನೇಕ ಸಂದೇಶಗಳಿಂದ ಧೈರ್ಯಪಡಿಸಿ ಗ್ರೀಸ್ ದೇಶಕ್ಕೆ ಬಂದನು.
ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ.
ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.
ಇಬ್ಬರು ಮೂವರು ಪ್ರವಾದಿಗಳು ಮಾತನಾಡಲಿ, ಮಿಕ್ಕಾದವರು ವಿವೇಚನೆಯಿಂದ ಕೇಳಲಿ.
ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.
ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಬುದ್ಧಿ ಹೇಳುತ್ತಾ,
¶ ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.
ಪ್ರವಾದನೆಗಳನ್ನು ಹಿನೈಸಬೇಡಿರಿ.
¶ ಎಲ್ಲಾದಕ್ಕಿಂತ ಮೊದಲು ಎಲ್ಲಾ ಜನರಿಗೋಸ್ಕರ ದೇವರಿಗೆ ವಿಜ್ಞಾಪನೆಗಳನ್ನೂ, ಪ್ರಾರ್ಥನೆಗಳನ್ನೂ, ಮನವಿಗಳನ್ನೂ, ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಕೇಳಿಕೊಳ್ಳುತ್ತೇನೆ.
ಹಾಗೆಯೇ ಯೌವನಸ್ಥರನ್ನು ಎಲ್ಲಾ ಸಂಗತಿಗಳಲ್ಲಿಯೂ ಸ್ವಸ್ಥ ಚಿತ್ತರಾಗಿರಬೇಕೆಂದು ಎಚ್ಚರಿಸು.
ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.