TSK

TSK · ಅಪೊಸ್ತಲರ ಕೃತ್ಯಗ 15:7

مراجع Treasury of Scripture Knowledge في ಕನ್ನಡ IRV.

العودة إلى المقطع

ಇಸ್ರಾಯೇಲರ ದೇವರಾದ ಯೆಹೋವನು ತನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಾಯೇಲರ ಅರಸನಾಗುವುದಕ್ಕೆ ಆರಿಸಿಕೊಂಡನು. ಆತನು ಯೆಹೂದ ಕುಲವು ರಾಜಕುಲವಾಗಬೇಕೆಂದು ನೇಮಿಸಿ, ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡನು. ನನ್ನ ತಂದೆಯ ಎಲ್ಲಾ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದನು.

‹ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನು›‹ಪೇತ್ರನು, ಈ›‹ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.›

‹ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.›

“ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು.

ನೀನು ಪವಿತ್ರಾತ್ಮನ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಿತೃವಾದ ದಾವೀದನ ಬಾಯಿಂದ, “‘ಅನ್ಯಜನಗಳು ಏಕೆ ಆಕ್ರೋಶಗೊಂಡರು? ಜನಾಂಗಗಳವರು ಏಕೆ ವ್ಯರ್ಥಕಾರ್ಯಗಳನ್ನು ಯೋಚಿಸುವರು?

ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ, ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು.

ನೀನು ಯಾರನ್ನಾದರು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು, ಅವನು ಚಮ್ಮಾರನಾದ ಸೀಮೋನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರ ತೀರದ ಸಮೀಪವಿದೆ’ ಅಂದನು.

ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.

ಈ ವಿಷಯದಲ್ಲಿ ತೀವ್ರವಾದ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸಮುದ್ರ ಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು.

ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.