ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.
TSK
TSK · ಅಪೊಸ್ತಲರ ಕೃತ್ಯಗ 16:14
مراجع Treasury of Scripture Knowledge في ಕನ್ನಡ IRV.
ಕರ್ತನಾದ ಯೆಹೋವನು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ.
‹“ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಸೆಳೆಯದ ಹೊರತು, ಯಾವನೂ ನನ್ನ ಬಳಿಗೆ ಬರಲಾರನು, ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.›
ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.
ಕರ್ತನ ಹಸ್ತವು ಅವರೊಂದಿಗಿದ್ದ ಕಾರಣ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿಕೊಂಡರು.
ಆದ್ದರಿಂದ ದೇವರ ದಯೆಯು ಮನುಷ್ಯರಿಗೆ ಅಪೇಕ್ಷಿಸುವುದರಿಂದಾಗಲಿ, ಪ್ರಯತ್ನಿಸುವುದರಿಂದಾಗಲಿ ದೊರೆಯದೆ ದೇವರು ಕರುಣಿಸುವುದರಿಂದಲೇ ದೊರೆಯುತ್ತದೆ.
ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಈ ದಿನದವರೆಗೂ ಹಳೇ ಒಡಂಬಡಿಕೆಯು ಓದುವಾಗೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.
¶ ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.
¶ ‹“ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ,›‹ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವುದೇನಂದರೆ,›
‹ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ.›‹ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ›‹ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.›