TSK

TSK · ಅಪೊಸ್ತಲರ ಕೃತ್ಯಗ 16:23

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಯೆಹೋಶುವನು ಆ ಯಾಜಕರಿಗೆ ಯೊರ್ದನ್ ನದಿಯಿಂದ ಹೊರಕ್ಕೆ ಬರಬೇಕೆಂದು ಆಜ್ಞಾಪಿಸಿದನು.

ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಅವನನ್ನು ಹಿಡಿಯಿರಿ” ಎಂದು ಮುನ್ಸೂಚನೆ ನೀಡಿದ್ದನು.

‹ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು.›

“ಸೆರೆಮನೆಯು ಭದ್ರವಾಗಿ ಮುಚ್ಚಿರುವುದನ್ನೂ, ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವುದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ” ಎಂದು ತಿಳಿಸಿದರು.

ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು, ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.

ಸೆರೆಮನೆಯ ಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ; “ಅಧಿಕಾರಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದುದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ” ಎಂದು ಹೇಳಿದನು.

¶ ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ನೀನು ಯುಕ್ತವಾದದ್ದನ್ನು ಮಾಡಬೇಕೆಂದು ಆಜ್ಞಾಪಿಸುವುದಕ್ಕೆ ನನಗೆ ಕ್ರಿಸ್ತನಲ್ಲಿ ಪೂರ್ಣ ಅಧಿಕಾರವಿದ್ದರೂ ಹಾಗೆ ಆಜ್ಞಾಪಿಸದೇ

‹ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ,›‹ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು›‹ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು.›‹ನೀನು ಸಾಯುವ ತನಕ›‹ನಂಬಿಗಸ್ತನಾಗಿರು, ನಾನು ನಿನಗೆ›‹ಜೀವದ ಕಿರೀಟವನ್ನು ಕೊಡುವೆನು.›