ನಾನು ಕಾಣದಿರುವುದನ್ನು ನೀನೇ ಸೂಚಿಸು; ನಾನು ಒಂದು ವೇಳೆ ಅನ್ಯಾಯವನ್ನು ಮಾಡಿದ್ದರೂ ಇನ್ನು ಮೇಲೆ ಮಾಡುವುದಿಲ್ಲ’ ಎಂದು ಹೇಳುವುದಕ್ಕಾದೀತೇ?
TSK
TSK · ಅಪೊಸ್ತಲರ ಕೃತ್ಯಗ 16:30
مراجع Treasury of Scripture Knowledge في ಕನ್ನಡ IRV.
ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು,
ನೀವು ಮಾನಸಾಂತರ ಹೊಂದಿರುವಿರಿ ಎಂಬುದಕ್ಕೆ ಯೋಗ್ಯವಾದ ಫಲವನ್ನು ತೋರಿಸಿರಿ.
ಆಗ ಆ ಗುಂಪಿನವರು, “ಹಾಗಾದರೆ ನಾವೇನು ಮಾಡಬೇಕು?” ಎಂದು ಆತನನ್ನು ಕೇಳಿದ್ದಕ್ಕೆ,
¶ ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, “ಸಹೋದರರೇ, ನಾವೇನು ಮಾಡಬೇಕು” ಎಂದು ಕೇಳಲು;
“ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.
ಅವನು ಇಂಥಾ ಅಪ್ಪಣೆಯನ್ನು ಹೊಂದಿ ಅವರನ್ನು ಸೆರೆಮನೆಯ ಒಳಕೋಣೆಯಲ್ಲಿ ಹಾಕಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.