¶ ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಮತ್ತು ಜನರು ಕುಣಿದಾಡುವುದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ತಗ್ಗಿನಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.
TSK
TSK · ಅಪೊಸ್ತಲರ ಕೃತ್ಯಗ 17:16
مراجع Treasury of Scripture Knowledge في ಕನ್ನಡ IRV.
¶ ಅವನು ಅದಕ್ಕೆ, “ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.
ಆಮೇಲೆ ಬೂಜ್ ಕುಲಕ್ಕೂ, ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡಿದ್ದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಬಂತು.
ನಿನ್ನ ಆಲಯದ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ.
ನಿನ್ನ ನುಡಿಯನ್ನು ಕೈಗೊಳ್ಳದ ಧರ್ಮಭ್ರಷ್ಟರನ್ನು ನೋಡಿ ಅಸಹ್ಯಪಟ್ಟಿದ್ದೇನೆ.
ನಾನಾದರೋ ಯೆಹೋವನ ಆತ್ಮ ಪ್ರೇರಣೆಯಿಂದ, ಬಲ ಪರಾಕ್ರಮ ಮತ್ತು ನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು, ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.
¶ ಆಗ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರ ಬಂದುದರಿಂದ ಯೇಸು ಯೆರೂಸಲೇಮಿಗೆ ಹೋದನು.
ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದನು.