TSK

TSK · ಅಪೊಸ್ತಲರ ಕೃತ್ಯಗ 17:28

مراجع Treasury of Scripture Knowledge في ಕನ್ನಡ IRV.

العودة إلى المقطع

ಯಾವನಾದರೂ ನನ್ನ ಒಡೆಯನಾದ ನಿನ್ನನ್ನು ಹಿಂಸಿಸಿ ಜೀವತೆಗೆಯಬೇಕೆಂದಿದ್ದರೂ, ಆ ನಿನ್ನ ಜೀವವು ನಿನ್ನ ದೇವರಾದ ಯೆಹೋವನ ರಕ್ಷಣೆಯಲ್ಲಿರುವ ಜೀವ ನಿಕ್ಷೇಪದಲ್ಲಿ ಭದ್ರವಾಗಿರಲಿ. ಆದರೆ ಆತನು ನಿನ್ನ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದು ಬಿಡಲಿ.

ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ.

ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.

‹ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಆತನಿಗೆ ಎಲ್ಲರೂ ಜೀವಿಸುವವರೇ”› ಎಂದು ಹೇಳಿದನು.

ಯೇಸು ಆಕೆಗೆ, ‹“ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು,›

“ಕ್ರೇತ್ ದ್ವೀಪದವರು ಯಾವಾಗಲೂ ಸುಳ್ಳುಗಾರರೂ, ದುಷ್ಟಮೃಗಗಳೂ, ಸೋಮಾರಿಗಳಾದ ಹೊಟ್ಟೆಬಾಕರೂ” ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿಯೇ ಒಬ್ಬ ಪ್ರವಾದಿಯು ಹೇಳಿದ್ದಾನೆ.

ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?