TSK

TSK · ಅಪೊಸ್ತಲರ ಕೃತ್ಯಗ 17:29

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯ್ಯಿಸಿದನು. ಆಗ ಅವರು “ಇಸ್ರಾಯೇಲರೇ ನೋಡಿರಿ, ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು” ಎಂದು ಹೇಳಿದರು.

ಹೀಗೆ ಅವರು ತಮ್ಮ ದಿವ್ಯಮಹಿಮೆಯ ದೇವರನ್ನು ಬಿಟ್ಟು, ಹುಲ್ಲು ತಿನ್ನುವ ಎತ್ತಿನ ಮೂರ್ತಿಯನ್ನು ಹಿಡಿದುಕೊಂಡರು.

ಯಾರು ಸಾಗರ ಸಮುದ್ರಗಳನ್ನು ಬರಿದಾದ ಕೈಯಿಂದ ಅಳತೆಮಾಡಿದವನು? ಯಾರು ಆಕಾಶಮಂಡಲದ ವ್ಯಾಪ್ತಿಯನ್ನು ಗೇಣಿನಿಂದ ನಿರ್ಣಯಿಸಿದವನು? ಭೂಲೋಕದ ಮಣ್ಣನ್ನೆಲ್ಲಾ ಕೊಳಗಕ್ಕೆ ತುಂಬಿದವನು ಯಾರು? ಬೆಟ್ಟಗಳನ್ನು ತ್ರಾಸಿನಿಂದಲೂ, ಗುಡ್ಡಗಳನ್ನು ತಕ್ಕಡಿಯಿಂದಲೂ ತೂಗಿದವನು ಯಾರು?

ವಿಗ್ರಹ ಕೆತ್ತುವವರೆಲ್ಲಾ ನಿರರ್ಥಕರು, ಅವರ ಇಷ್ಟದ ವಿಗ್ರಹಗಳು ಯಾವುದಕ್ಕೂ ಉಪಯೋಗವಿಲ್ಲ, ವಿಗ್ರಹಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ, ಅವರು ನಾಚಿಕೆಗೆ ಗುರಿಯಾಗುವರು.

ಅದನ್ನು ಬೆಳ್ಳಿ, ಬಂಗಾರಗಳಿಂದ ಭೂಷಿಸುತ್ತಾರೆ, ಅಲುಗದಂತೆ ಮೊಳೆಗಳಿಂದ, ಸುತ್ತಿಗೆಯಿಂದ ಭದ್ರಪಡಿಸುತ್ತಾರೆ.

ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ.