ಹಾಗಾದರೆ ಈಗಲೇ ನೀನು ಹೊರಡು, ನಾನು ನಿನ್ನಗೆ ಮಾತನಾಡಲು ಬೇಕಾದ ಸಾಮರ್ಥ್ಯವನ್ನು ಕೊಡುತ್ತಾ, ನೀನು ಮಾತನಾಡಬೇಕಾದದ್ದನ್ನು ನಿನಗೆ ಬೋಧಿಸುವೆನು” ಎಂದು ಹೇಳಿದನು.
TSK
TSK · ಅಪೊಸ್ತಲರ ಕೃತ್ಯಗ 18:10
مراجع Treasury of Scripture Knowledge في ಕನ್ನಡ IRV.
ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.
ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ. ಏಕೆಂದರೆ ದೇವರು ನಮ್ಮ ಕೂಡ ಇದ್ದಾನಷ್ಟೆ.
ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.
ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ, ಕಬ್ಬಿಣದ ಕಂಬವನ್ನಾಗಿಯೂ, ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.
“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”
‹ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು›‹ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ”› ಎಂದು ಹೇಳಿದನು.
‹ಇದಲ್ಲದೆ›‹ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ›‹ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.›
¶ “ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
¶ ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.