TSK

TSK · ಅಪೊಸ್ತಲರ ಕೃತ್ಯಗ 18:21

مراجع Treasury of Scripture Knowledge في ಕನ್ನಡ IRV.

العودة إلى المقطع

ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, ‹“ನನ್ನ ತಂದೆಯೇ, ಸಾಧ್ಯವಾದರೆ ಈ›‹ಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ”› ಎಂದು ದೇವರನ್ನು ಪ್ರಾರ್ಥಿಸಿದನು.

ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.”

ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿನದ ಹಬ್ಬಕ್ಕೆ ಯೆರೂಸಲೇಮಿನಲ್ಲಿರಬೇಕೆಂದು ಅವಸರಪಡುತ್ತಾ ಇದ್ದುದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವುದಕ್ಕೆ ಮನಸ್ಸಿಲ್ಲದೆ ಎಫೆಸ ಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.

ದೈವಚಿತ್ತದಿಂದ ನಾನು ನಿಮ್ಮಲ್ಲಿಗೆ ಬರಲು ಈಗಲಾದರೂ ಅನುಕೂಲವಾಗಲೆಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ.

ಆದರೆ ಕರ್ತನ ಚಿತ್ತವಾದರೆ ನಾನು ಬೇಗನೆ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿರುವವರ ಮಾತನ್ನು ಮಾತ್ರವಲ್ಲ ಅವರ ಬಲವನ್ನು ಕಂಡುಹಿಡಿಯುತ್ತೇನೆ.

¶ ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.

ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತಲೂ ಒಳ್ಳೆ ನಡತೆಯುಳ್ಳವರಾಗಿಯೇ ದೇವರ ಚಿತ್ತದ ಪ್ರಕಾರ ಬಾಧೆಪಡುವುದು ಉತ್ತಮ.