TSK

TSK · ಅಪೊಸ್ತಲರ ಕೃತ್ಯಗ 18:25

مراجع Treasury of Scripture Knowledge في ಕನ್ನಡ IRV.

العودة إلى المقطع

ಇವರೂ ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಯೆಹೋವನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮೂಲಕವಾಗಿ ಪರೀಕ್ಷಿಸುವೆನು” ಅಂದನು.

ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು.

ಇಗೋ ಒಂದು ವಾಣಿ! “ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಿಪಡಿಸಿರಿ”

ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.

“‘ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ’ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.

¶ ಚಕ್ರವರ್ತಿಯಾದ ತಿಬೇರಿಯನು ಆಳ್ವಿಕೆಗೆ ಬಂದ ಹದಿನೈದನೆಯ ವರ್ಷದಲ್ಲಿ, ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ, ಹೆರೋದನು ಗಲಿಲಾಯಕ್ಕೆ ಉಪರಾಜನೂ, ಅವನ ತಮ್ಮನಾದ ಫಿಲಿಪ್ಪನು ಇತುರಾಯ ತ್ರಕೋನೀತಿ ಸೀಮೆಗಳಿಗೆ ಉಪರಾಜನೂ, ಲುಸನ್ಯನು ಅಬಿಲೇನೆಗೆ ಉಪರಾಜನೂ ಆಗಿರುವಲ್ಲಿ

¶ ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ,

ಅವನನ್ನು ದೃಷ್ಟಿಸಿನೋಡಿ; “ಸೈತಾನನ ಮಗನೇ, ಮೋಸದಿಂದಲೂ, ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೇರವಾದ ಮಾರ್ಗಗಳನ್ನು ಡೊಂಕು ಮಾಡುವುದನ್ನು ಬಿಡುವುದಿಲ್ಲವೋ?

ಅವನು; “ನೀವು ಏನನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡಿರಿ” ಎಂದು ಕೇಳಿದ್ದಕ್ಕೆ ಅವರು; “ಯೋಹಾನನ ಬೋಧನೆಯನ್ನು ನಂಬಿ ದೀಕ್ಷಾಸ್ನಾನಮಾಡಿಸಿಕೊಂಡೆವು” ಅಂದರು.

ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ.

ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.