¶ ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,
TSK
TSK · ಅಪೊಸ್ತಲರ ಕೃತ್ಯಗ 19:10
مراجع Treasury of Scripture Knowledge في ಕನ್ನಡ IRV.
ಅವನು ಒಂದು ವರ್ಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಆ ಜನರಿಗೆ ದೇವರ ವಾಕ್ಯವನ್ನು ಉಪದೇಶಮಾಡುತ್ತಿದ್ದನು.
ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಮತ್ತು ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ತಂಗಿದನು.
ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ; “ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿನದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿಯೂ ಹೇಗೆ ನಡೆದುಕೊಂಡೆನೆಂಬುದನ್ನು ನೀವೇ ಬಲ್ಲಿರಿ.
ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.
ಈ ವಿಷಯದಲ್ಲಿ ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ.
ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;
ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.
¶ ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ,
ಅದು, ‹“ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು”› ಎಂದು ನುಡಿಯಿತು.