ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೇ ಸರಿ.
TSK
TSK · ಅಪೊಸ್ತಲರ ಕೃತ್ಯಗ 2:14
مراجع Treasury of Scripture Knowledge في ಕನ್ನಡ IRV.
ನೀತಿಯನ್ನು ಹಿಂಬಾಲಿಸುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ, ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರೋ, ಯಾವ ಗುಂಡಿಯಿಂದ ಅಗೆಯಲ್ಪಟ್ಟಿರೋ ಆ ಕಡೆಗೆ ನೋಡಿರಿ.
ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ.
ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.
“ತುತ್ತೂರಿಯನ್ನು ಹಿಡಿದು ಊದು. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ, ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.
¶ “ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.
ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;
“ಇಸ್ರಾಯೇಲ್ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು.