ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭೂಮಿಯನ್ನು ಹಾಳು ಮಾಡಿ, ಪಾಪಿಗಳನ್ನು ನಿರ್ಮೂಲಮಾಡುವುದಕ್ಕೆ ಆತನ ಕೋಪೋದ್ರೇಕದಿಂದಲೂ, ತೀಕ್ಷ್ಣವಾದ ರೋಷದಿಂದಲೂ ಕ್ರೂರವಾಗಿರುವುದು.
TSK
TSK · ಅಪೊಸ್ತಲರ ಕೃತ್ಯಗ 2:20
مراجع Treasury of Scripture Knowledge في ಕನ್ನಡ IRV.
ಆಮೇಲೆ ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇಮನ್ನು ಆಳುವನು. ಆತನ ಪರಿವಾರದ ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವುದು.
¶ ನಾನು ದಿವ್ಯಜ್ಞಾನದಿಂದ ನೋಡಿದೆನು, ಆಹಾ! ಭೂಲೋಕವು ಹಾಳುಪಾಳಾಗಿತ್ತು; ಆಕಾಶವನ್ನು ನೋಡಿದೆನು, ಅದರಲ್ಲಿ ಬೆಳಕೇ ಇರಲಿಲ್ಲ.
ಆಹಾ ತೀರ್ಪಿನ ತಗ್ಗಿನಲ್ಲಿ ಗುಂಪುಗುಂಪುಗಳಾಗಿ ಜನರಿದ್ದಾರೆ. ಏಕೆಂದರೆ ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿದೆ.
ಆ ಕಾಲವು ಹೊಟ್ಟಿನಂತೆ ಹಾರಿಹೋಗುತ್ತದಲ್ಲಾ.
¶ ‹“ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.›
¶ ‹ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ;› ‹“‘ಸೂರ್ಯನು ಕತ್ತಲಾಗಿ ಹೋಗುವನು.›
ಅವನನ್ನು ಸೈತಾನನಿಗೆ ಒಪ್ಪಿಸಿರಿ ಯಾಕೆಂದರೆ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವುದಕ್ಕಾಗಿ ಅವನ ಶರೀರಭಾವವು ನಾಶವಾಗುವಂತೆ ಕರ್ತನಾದ ಯೇಸುವಿನ ಶಕ್ತಿಯಿಂದ ತೀರ್ಪು ಮಾಡಿದ್ದೇನೆ.
ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.
¶ ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾಭೂಕಂಪ ಉಂಟಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು.