ಅಲ್ಲಿರುವ ನಜರೇತೆಂಬ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನು ನಜರೇತಿನವನೆಂದು ಕರೆಯಲ್ಪಡುವನು” ಎಂಬುದಾಗಿ ಪ್ರವಾದಿಗಳು ಹೇಳಿರುವ ಮಾತು ನೆರವೇರಿತು.
TSK
TSK · ಅಪೊಸ್ತಲರ ಕೃತ್ಯಗ 2:22
مراجع Treasury of Scripture Knowledge في ಕನ್ನಡ IRV.
¶ ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನು ಕೇಳಿದಾಗ, ಆತನ ಬಳಿಗೆ ತನ್ನ ಶಿಷ್ಯರನ್ನು ಕಳುಹಿಸಿ,
¶ ಅವರು ಯೇಸುವಿನ ಬಳಿಗೆ ಬಂದು, “‘ಬರಬೇಕಾದವನು ನೀನೋ ಅಥವಾ ನಾವು ಮತ್ತೊಬ್ಬನ ಬರುವಿಕೆಗಾಗಿ ಕಾಯಬೇಕೋ?’ ಎಂದು ಕೇಳುವುದಕ್ಕಾಗಿ ಸ್ನಾನಿಕನಾದ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಅಂದರು.
ಅವರು ಅವನಿಗೆ, ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ತಿಳಿಸಿದಾಗ,
ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು.
ಯೇಸು ಅವನಿಗೆ ‹“ನೀವು ಸೂಚಕ ಕಾರ್ಯಗಳನ್ನೂ ಮತ್ತು ಅದ್ಭುತ ಕಾರ್ಯಗಳನ್ನೂ ನೋಡದಿದ್ದರೆ ನಂಬುವುದೇ ಇಲ್ಲ”› ಎಂದು ಹೇಳಿದನು.
‹ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.›
‹ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ”› ಎಂದನು.
ಈತನು ದೇವರಿಂದ ಬಂದವನಲ್ಲದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು” ಎಂದನು.
ಯೇಸು ಆಕೆಗೆ, ‹“ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ?”› ಎಂದು ಉತ್ತರ ಕೊಟ್ಟನು
ಇದಲ್ಲದೆ ಆತನು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರೇ ಈ ವಿಷಯಕ್ಕೆ ಸಾಕ್ಷಿಕೊಡುತ್ತಿದ್ದರು.
‹ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಆದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ›
ಪೇತ್ರನು ಇದನ್ನು ನೋಡಿ ಜನರಿಗೆ; “ಇಸ್ರಾಯೇಲ್ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನೀವು ನಮ್ಮನೇಕೆ ಈ ರೀತಿ ದೃಷ್ಟಿಯಿಟ್ಟು ನೋಡುತ್ತಿದ್ದಿರಿ? ನಾವು ನಮ್ಮ ಸ್ವಂತ ಶಕ್ತಿಯಿಂದಾಗಲಿ, ನಮ್ಮ ದೈವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.
ಅನಂತರ ಸಭೆಯವರಿಗೆ, “ಇಸ್ರಾಯೇಲ್ ಜನರೇ, ನೀವು ಈ ಮನುಷ್ಯರ ವಿಷಯದಲ್ಲಿ ತೆಗೆದುಕೊಳ್ಳುವ ನಿರ್ಧಾರದ ಕುರಿತು ಎಚ್ಚರಿಕೆಯುಳ್ಳವರಾಗಿರಿ.
ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಯೋಹಾನನು ಸಾರಿದ ತರುವಾಯ ಈ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ, ಯೂದಾಯದಲ್ಲೆಲ್ಲಾ ಪ್ರಬಲವಾಯಿತು.
ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.
¶ “‘ಅದಕ್ಕೆ ನಾನು; ಕರ್ತನೇ, ನೀನಾರು?’ ಎಂದು ಕೇಳಲು ಆತನು; ‹‘ನೀನು ಹಿಂಸೆಪಡಿಸುವ ನಜರೇತಿನ ಯೇಸುವೇ ನಾನು’› ಎಂದು ನನಗೆ ಹೇಳಿದನು.
ಒಂದು ಕಾಲದಲ್ಲಿ ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡೆಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.
ನಾನು ಹಿಂಸೆಯನ್ನು ಸ್ಥಿರಚಿತ್ತದಿಂದ ತಾಳಿಕೊಳ್ಳುವುದರಲ್ಲಿಯೂ, ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಗಳನ್ನೂ, ಹಾಗೂ ಮಹತ್ಕಾರ್ಯಗಳನ್ನೂ ನಡಿಸಿದ್ದರಲ್ಲಿಯೂ ಒಬ್ಬ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಮ್ಮ ಮಧ್ಯದಲ್ಲಿ ಪ್ರಕಟವಾದವಲ್ಲಾ.