ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು.
TSK
TSK · ಅಪೊಸ್ತಲರ ಕೃತ್ಯಗ 2:37
مراجع Treasury of Scripture Knowledge في ಕನ್ನಡ IRV.
ಆಗ ಆ ಗುಂಪಿನವರು, “ಹಾಗಾದರೆ ನಾವೇನು ಮಾಡಬೇಕು?” ಎಂದು ಆತನನ್ನು ಕೇಳಿದ್ದಕ್ಕೆ,
ಸಿಪಾಯಿಗಳು ಸಹ ಬಂದು, “ನಾವು ಏನು ಮಾಡಬೇಕು” ಎಂದು ಆತನನ್ನು ಕೇಳಿದಾಗ ಆತನು ಅವರಿಗೆ, “ಯಾರನ್ನಾದರೂ ಬೆದರಿಸಿ ದುಡ್ಡು ಕಸಿದುಕೊಳ್ಳಬೇಡಿರಿ; ಯಾರ ಮೇಲೆಯೂ ಸುಳ್ಳುದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ” ಎಂದು ಹೇಳಿದನು.
‹ಆತನು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ಕುರಿತು ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.›
¶ ಸಭಿಕರು ಈ ಮಾತನ್ನು ಕೇಳಿ ರೌದ್ರಗೊಂಡು ಅವರನ್ನು ಕೊಲ್ಲಿಸಬೇಕೆಂದು ಆಲೋಚಿಸಿದರು.
¶ ಅದಕ್ಕೆ ಸೌಲನು;, “ಕರ್ತನೇ, ನೀನಾರು?” ಎಂದು ಕೇಳಿದ್ದಕ್ಕೆ, ಕರ್ತನು, ‹“ನೀನು ಹಿಂಸೆಪಡಿಸುವ ಯೇಸುವೇ ನಾನು;›
¶ “ಆಗ ನಾನು; ‘ಕರ್ತನೇ, ನಾನೇನು ಮಾಡಬೇಕು’? ಎಂದು ಕೇಳಲು ಕರ್ತನು ನನಗೆ; ‹‘ನೀನೆದ್ದು ದಮಸ್ಕದೊಳಕ್ಕೆ ಹೋಗು, ಮಾಡುವುದಕ್ಕೆ ನಿನಗೆ ನೇಮಿಸಿರುವುದನ್ನೆಲ್ಲಾ ಅಲ್ಲಿ ತಿಳಿಸಲ್ಪಡುವುದು’› ಎಂದು ಹೇಳಿದನು.
ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು.
ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.