TSK

TSK · ಅಪೊಸ್ತಲರ ಕೃತ್ಯಗ 2:38

مراجع Treasury of Scripture Knowledge في ಕನ್ನಡ IRV.

العودة إلى المقطع

ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.

ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.

ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು. ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು.

ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”

ಅಂದಿನಿಂದ ಯೇಸು, ‹“ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು”› ಎಂದು ಸಾರುವುದಕ್ಕೆ ಪ್ರಾರಂಭಿಸಿದನು.

‹ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.›

‹ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.›

‹ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.›

ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ

¶ ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.

ಆದರೆ ಪೇತ್ರನು ಅವನಿಗೆ, “ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?

ಕಂಚುಕಿಯು, “ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?” ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು;

ನೀವು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಅಪ್ಪಣೆಕೊಟ್ಟನು. ಆ ಮೇಲೆ ಅವರು ಅವನನ್ನು ಇನ್ನೂ ಕೆಲವು ದಿನ ಅವರೊಂದಿಗೆ ಇರಬೇಕೆಂದು ಬೇಡಿಕೊಂಡರು.

ಅವರು; “ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು” ಎಂದು ಹೇಳಿ,

ಅದಕ್ಕೆ ಪೌಲನು; “ಯೋಹಾನನು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬುದಾಗಿ ಜನರಿಗೆ ಹೇಳಿದನು” ಎಂದು ಹೇಳಲು,

ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ’ ಅಂದನು.

ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.

ಕ್ರಿಸ್ತನು ವಿಭಾಗಿಸಲ್ಪಟ್ಟಿದ್ದಾನೋ? ನಿಮಗೋಸ್ಕರ ಶಿಲುಬೆಗೇರಿದವನು ಪೌಲನೋ? ಪೌಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೋ?

ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ.