ಯೆಹೋವನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಅಭಿವೃದ್ಧಿಪಡಿಸಲಿ;
TSK
TSK · ಅಪೊಸ್ತಲರ ಕೃತ್ಯಗ 2:39
مراجع Treasury of Scripture Knowledge في ಕನ್ನಡ IRV.
ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು.
ಹೀಗಿರಲು ಪಶ್ಚಿಮದವರು ಯೆಹೋವನ ನಾಮಕ್ಕೆ ಹೆದರುವರು, ಪೂರ್ವ ದಿಕ್ಕಿನವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ.
ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪೂರ್ವಿಕರು ವಾಸಿಸಿದ ದೇಶದಲ್ಲಿ ಅವರೂ ಮತ್ತು ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು. ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಅರಸನಾಗಿರುವನು.
ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.”
ಅವರು ನಾನಾ ಭಾಷೆಗಳನ್ನಾಡುತ್ತಾ, ದೇವರನ್ನು ಕೊಂಡಾಡುತ್ತಾ ಇರುವುದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ನೋಡಿ,
ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.
ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು.
ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು.
ಆತನು ಕರುಣಿಸಿದ ನಮ್ಮನ್ನು ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿರುವಂತೆ ಅನ್ಯಜನರೊಳಗಿಂದ ಸಹ ಕರೆದನು.
ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.
ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ,
ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.
ಆದುದರಿಂದ ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಮಾಡಿ, ನಮ್ಮ ದೇವರು ನಿಮ್ಮನ್ನು ಕರೆದದ್ದಕ್ಕೆ ತಾನೇ ನಿಮ್ಮನ್ನು ಯೋಗ್ಯರೆಂದು ಎಣಿಸಬೇಕೆಂತಲೂ, ಸತ್ಕ್ರಿಯೆಗಳಿಗಾಗಿರುವ ನಿಮ್ಮ ಸಕಲ ಆಸೆಗಳನ್ನೂ, ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಶಕ್ತಿಪೂರ್ವಕವಾಗಿ ಈಡೇರಿಸಬೇಕೆಂತಲೂ ಬೇಡಿಕೊಳ್ಳುತ್ತೇವೆ.
ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,
¶ ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.
¶ ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು.
ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”